ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆಗೆ ದಿಢೀರನೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್. ಟಿ.
ಕೂಡ್ಲಿಗಿಯ ಸಂಡೂರು ರಸ್ತೆಯಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ. 06-08-24 ರಂದು ವಿವಿಧ ಸಮಸ್ಯೆಗಳ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಿಢೀರನೆ ಭೇಟಿ ನೀಡಿ ಮಹಿಳಾ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಕ್ಷೇತ್ರದಲ್ಲಿನ ಬಡವರು – ಕಡು ಬಡವರ ಮಕ್ಕಳ ಶಿಶು ಅಭಿವೃದ್ಧಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಖಡಕ್ಕಾದ ಎಚ್ಚರಿಕೆ ನೀಡಿದರು. ನಮ್ಮ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮತ್ತು ಅವ್ಯವಹಾರವನ್ನು ಸಹಿಸುವುದಿಲ್ಲ ಎಂದರು. ಅಂಗನವಾಡಿ ಕೇಂದ್ರಗಳ ಕೊಠಡಿಗಳ ಅಂಕಿ ಅಂಶಗಳು, ಮಕ್ಕಳ ಸಂಖ್ಯೆ ಹಾಗೂ ಸಿಬ್ಬಂದಿಯ ಮಾಹಿತಿ ಪಡೆದುಕೊಂಡರು. ಮಕ್ಕಳು ಮತ್ತು ಗರ್ಭಿಣಿಯರಿಗೆ ಗುಣಮಟ್ಟದ ಆಹಾರ ಕಿಟ್ ವಿತರಿಸಲು ಸೂಚಿಸಿದರು. ಕೆಲವರಿಗೆ ಗೃಹ ಲಕ್ಷ್ಮೀಯ ಹಣ ಬರದೇ ಇರುವ ಸಮಸ್ಯೆಗಳು ಈ ಹಿಂದೆಯೇ ಕೇಳಿಬಂದಿವೆ. ಆಧಾರ ಕಾಡ್೯ಗಳಲ್ಲಿ ಅಕ್ಷರ ದೋಷಗಳು ಕಂಡುಬಂದಿರುವುದರಿಂದ ತಾಂತ್ರಿಕವಾಗಿ ಕೆಲವು ತೊಡಕುಗಳು ಎದುರು ಆಗದಂತೆ ಮುಂದಿನ ದಿನಗಳಲ್ಲಿ ಸಿಬ್ಬಂದಿಗಳು ಕೆಲಸ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದರು. ಕಛೇರಿಯ ಕುಂದುಕೊರತೆಗಳು ಆಲಿಸಿದರು. ಈ ವೇಳೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು…
ವರದಿ. ಎಮ್. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030