ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್. ಟಿ.
ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ; 16-08-24 ರಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ 19 ನೇ ಕ್ರಸ್ಟ್ ಗೇಟ್ ಮತ್ತು ಚೈನ್ ನೀರಿನಲ್ಲಿ ಕೊಚ್ಚಿಹೋಗಿರುವುದರ ಹಿನ್ನೆಲೆಯಲ್ಲಿ ಅಮೀತ್ ಎಂಜಿನಿಯರಿಂಗ್, ಜೆ. ಎಸ್. ಡಬ್ಲ್ಯೂ ಎಂಜಿನಿಯರಿಂಗ್ ಹಾಗೂ ನಾರಾಯಣ ಎಂಜಿನಿಯರಿಂಗ್ ಅವರ ನೇತೃತ್ವದಲ್ಲಿ ಕಬ್ಬಿಣದ ಹೊಸ ಪ್ಲೇಟ್ ಸಿದ್ಧಪಡಿಸಿರುವುದನ್ನು ವೀಕ್ಷಿಸಿದರು. ಅಮೀತ್ ಎಂಜಿನಿಯರಿಂಗ್ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ಜೊತೆಗೆ ಶಾಸಕರು ಚರ್ಚಿಸಿ ಕಾಮಗಾರಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ವಿವಿಧ ತಾಂತ್ರಿಕ ತಜ್ಞರು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030