ದುರ್ಗಾದೇವಿ, ಸೌಮ್ಯ, ವಿದ್ಯಾಶ್ರೀ, ಪರಶುರಾಮ, ಆದಿತ್ಯಗೆ
ಗಣಿತ ಪ್ರಾವೀಣ್ಯತೆ ಪ್ರಮಾಣ ಪತ್ರ ವಿತರಿಸಿ ಅಭಿನಂದನೆ
ಕೊಪ್ಪಳ: ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮದಡಿ ಉತ್ತಮ ಸಾಧನೆ ಮಾಡಿದ ಕೊಪ್ಪಳ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೊಪ್ಪಳ ಜಿಲ್ಲಾಡಳಿತದಿಂದ ಸೆ.17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಗಣಿತ ಪ್ರಾವೀಣ್ಯತೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಗಂಗಾವತಿ ತಾಲೂಕಿನ ಮಲಕನಮರಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರ್ಗಾದೇವಿ, ಕೊಪ್ಪಳ ತಾಲೂಕಿನ ಓಜಿನಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸೌಮ್ಯ ಮಲ್ಲಪ್ಪ ಮತ್ತು ವಿದ್ಯಾಶ್ರೀ, ಹಾಲವರ್ತಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರುಶುರಾಮ ಬಸವರಾಜ ಮತ್ತು ಆದಿತ್ಯ ಆಂಜನೇಯ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಹೇಮಲತಾ ನಾಯಕ ಅವರು ಗಣಿತ ಪ್ರಾವೀಣ್ಯತೆ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಕರ್ನಾಟಕ ಸರ್ಕಾರ ಮತ್ತು ಅಕ್ಷರ ಫೌಂಡೇಶನ್ ಅವರ ಸಹಭಾಗಿತ್ವದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಜೆಎಸ್ಡಬ್ಲೂö್ಯ ಎಂಜಿ ಮೋಟರ್ ಅವರಿಂದ ನಡೆದ ಕಲಿಕಾ ಆಂದೋಲನ ಕಾರ್ಯಕ್ರಮದಡಿ 2023-24ನೇ ಸೇಲಿನ ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಫರ್ಧೆಯಲ್ಲಿ ದುರ್ಗಾದೇವಿ, ಸೌಮ್ಯ, ವಿದ್ಯಾಶ್ರೀ, ಪರಶುರಾಮ ಮತ್ತು ಆದಿತ್ಯ ಅವರು ಭಾಗಿಯಾಗಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಅಭಿನಂದಿಸಲಾಯಿತು.
ಈ ವೇಳೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ ಹಾಗೂ ಇನ್ನೀತರರು ಇದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030