ಮುಗದ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಸಿಇಓ ಅವರಿಂದ ಜರುಗಿದ ಸಾರ್ವಜನಿಕ ಕುಂದುಕೊರತೆ ಸಭೆ
ಧಾರವಾಡ :ಧಾರವಾಡ ತಾಲೂಕಿನ ಮುಗದ ಗ್ರಾಮ ಪಂಚಾಯತಿಯಲ್ಲಿ ಇಂದು ಮಧ್ಯಾಹ್ನ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕುಂದು ಕೊರತೆ ನಿವಾರಣಾ ಸಭೆ ಜರುಗಿತು.
ಸಭೆಯಲ್ಲಿ ಅನೇಕ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ, ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸಿದರು.ನಂತರ ಅವರು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳನ್ನು ಗ್ರಾಮಸ್ಥರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ದೀಪಕ ಮಡಿವಾಳರ, ಸಹಾಯಕ ನಿರ್ದೇಶಕರಾದ ಚಂದ್ರು ಪೂಜಾರ, ಗೀರಿಶ ಕೋರಿ ಮತ್ತು ತಾಲೂಕಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಗದ ಗ್ರಾಮ ಪಂಚಾಯತ ಅಧ್ಯಕ್ಷರು,ಉಪಾಧ್ಯಕ್ಷರು, ಎಲ್ಲ ಸದಸ್ಯರು,ಪಿಡಿಓ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030