ಮುನಿರಾಬಾದ್ ಪೋಲಿಸ್ ಠಾಣೆಯಲ್ಲಿ ನಶೆಮುಕ್ತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡ ಸಿ .ಪಿ. ಐ ವಿಶ್ವನಾಥ ಹಿರೇಗೌಡರ್ ಮತ್ತು ಪಿ .ಎಸ್. ಐ. ಸುಪ್ರೀತ್ ಪಾಟೀಲ್* ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ನೇತೃತ್ವದಲ್ಲಿ ನಶೆಮುಕ್ತಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು . ಯುವಕರು ದುಶ್ಚಟಗಳಿಗೆ ಬಲಿಯಾಗದಂತೆ ಹಾಗೂ ಮದ್ಯಪಾನವನ್ನು ಸೇವಿಸುವರ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ನಶೆಮುಕ್ತಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು . ಆರೋಗ್ಯದ ಮಹತ್ವವನ್ನು ಪ್ರತಿಯೊಬ್ಬರಿಗೂ ತಿಳಿಸಿಕೊಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .ಈ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಗ್ರಾಮೀಣ ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಆದ ವಿಶ್ವನಾಥ ಹಿರೇಗೌಡರ್ ಮತ್ತು ಮುನಿರಾಬಾದ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸುಪ್ರೀತ್ ಪಾಟೀಲ್ ಹಾಗೂ ಮುನಿರಾಬಾದ್ ಪೊಲೀಸ್ ಠಾಣೆಯ ಸರ್ವ ಸಿಬ್ಬಂದಿಗಳು ,ಮುನಿರಾಬಾದಿನ ಗ್ರಾಮಸ್ಥರು ಯುವಕರು ಎಲ್ಲರೂ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು …
ವರದಿ.ಮಂಜುನಾಥ್ ದೊಡ್ಡಮನಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030