ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸಿರವಾರ ತಾಲೂಕಿನ ಹಿರೇಬದರದಿನ್ನಿಯಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ಮಕ್ಕಳ ಹುಕ್ಕುಗಳ ರಕ್ಷಣೆ ನಮ್ಮೆಲರ ಕರ್ತವ್ಯ; ಮುದುಕಪ್ಪ ಹೆಚ್
ರಾಯಚೂರು,:- ಮಕ್ಕಳ ಹುಕ್ಕುಗಳ ರಕ್ಷಣೆ ನಮ್ಮೆಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶೋಷಣೆ ಹಾಗೂ ದೌರ್ಜನ್ಯಕ್ಕೊಳಗಾದ 18 ವರ್ಷದೊಳಗಿನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜೊತೆಗೆ ಉತ್ತಮ ಶಿಕ್ಷಣ ಹಾಗೂ ಮೂಲಸೌಕರ್ಯ ಒದಗಿಸಲು ಎಲ್ಲರೂ ಕೈಜೋಡಿಸಬೇಕು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾದ ಮುದುಕಪ್ಪ ಹೆಚ್. ಅವರು ಹೇಳಿದರು.
ಅವರು ಇತ್ತಿಚೀಗೆ ಜಿಲ್ಲೆಯ ಸಿರವಾರ ತಾಲೂಕಿನ ಹಿರೇಬದರದಿನ್ನಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ರಾಯಚೂರು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ವಿವಿಧ ಕಾಯ್ದೆಗಳ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯ ವ್ಯಾಪ್ತಿ ಬಗ್ಗೆ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲನ್ಯಾಯ ಕಾಯ್ದೆ 2015ರ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಯಕರ್ತ ತಿಕ್ಕಯ್ಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಾಂಸ್ಥಿಕ ರಕ್ಷಣಾಧಿಕಾರಿ ಹನುಮೇಶ, ಮಕ್ಕಳ ಸಹಾಯವಾಣಿ ಘಟಕದ ವಿಷಯ ನಿರ್ವಹಕ ತಾಯರಾಜ್ ಸೇರಿದಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರು, ಎಸ್.ಡಿ.ಎಂ.ಸಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ & ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರು ಇದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030