ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ರವರ 136ನೇ ಜಯಂತಿ ಉತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ 2024
ಸಂಡೂರಿನ ಆದರ್ಶ ಕಲ್ಯಾಣ ಮಂಟಪದಲ್ಲಿ ಸಪ್ಟೆಂಬರ್ 5 2024 ರಂದು ರಾಧಾಕೃಷ್ಣನ್ ಅವರ 136ನೇ ಜಯಂತೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದರು.
ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಸೆಪ್ಟೆಂಬರ್ ಐದರಂದು ಶಿಕ್ಷಕರ ದಿನಾಚರಣೆಯನ್ನು ನಡೆಸಲಾಯಿತು ಈ ಕಾರ್ಯಕ್ರಮದಲ್ಲಿ ಶ್ರೀ ಮ ನಿ ಪ್ರ ಪ್ರಭು ಸ್ವಾಮಿಗಳು ವಿರಕ್ತಮಠ ಸಂಡೂರು ಇವರು ದಿವ್ಯ ಸಾನಿಧ್ಯವನ್ನು ವಹಿಸಿದ್ದರು, ಸನ್ಮಾನ್ಯ ಸಿರಾಜ್ ಅಹಮದ್ ಅಧ್ಯಕ್ಷರು ಪುರಸಭೆ ಸಂಡೂರು ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸನ್ಮಾನ್ಯ ಶ್ರೀ ಇ ತುಕಾರಾಂ ಮಾನ್ಯ ಸಂಸದರು ಲೋಕಸಭಾ ಕ್ಷೇತ್ರ ಬಳ್ಳಾರಿ ಇವರು ಉದ್ಘಾಟನೆಯನ್ನು ಮಾಡಿದರು.
ಉಪನ್ಯಾಸಕರಾಗಿ ಡಾಕ್ಟರ್ ರಮೇಶ್ ನಾಯಕ್ ಪ್ರಾಧ್ಯಾಪಕರು ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರು ಆಗಮಿಸಿ ಉಪನ್ಯಾಸವನ್ನು ನೀಡಿದರು.
ವಿಶೇಷ ಆಹ್ವಾನಿತರಾಗಿ ಶ್ರೀ ಬಿ ನಾಗನಗೌಡ ಬಿಕೆಜಿ ಫೌಂಡೇಶನ್ ಹಾಗೂ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಸಂಡೂರು.
ಹಾಗೂ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು
ಇಲಾಖೆಯ ಅಧಿಕಾರಿಗಳು, ಶಿಕ್ಷಣ ಪ್ರೇಮಿಗಳು, ಪತ್ರಕರ್ತರು, ಶಿಕ್ಷಕರು, ಶಿಕ್ಷಕಿಯರು ಗಣ್ಯಮಾನ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು…
ವರದಿ, ಉಜ್ಜಿನಯ್ಯ ಸಂಡೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030