ಹೂಡೇಂ: ಅಂಬೇಡ್ಕರ್ ನಗರದಲ್ಲಿ ಪುನೀತ್ ರಾಜಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ.!
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದ ನಟ ಸಾರ್ವಭೌಮ ರಾಷ್ಟ್ರಪ್ರಶಸ್ತಿ ವಿಜೇತ ಪುನೀತ್ ರಾಜಕುಮಾರ್ ಅಗಲಿಕೆ ತೀವ್ರ ನೋವು ಉಂಟಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು 26 ಅನಾಥಾಶ್ರ, 46 ಉಚಿತ ಶಾಲೆ, 16 ವೃದ್ರಾಶ್ರಮ, 19 ಗೋಶಾಲೆ, 1800 ಮಕ್ಕಳ ಸಂಪೂರ್ಣ ಶಿಕ್ಷಣ ಹಾಗೂ ಶಕ್ತಿ ಧಾಮ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ವ್ಯವಸ್ಥೆ ನೋಡಿಕೊಳ್ಳುತ್ತಿರುವ ಪುನೀತ್ ರಾಜಕುಮಾರ್ ಎಂದು ಅಭಿಮಾನಿಗಳು ಮಾತನಾಡಿದರು. ನಂತರ ಪುನೀತ್ ರಾಜಕುಮಾರ್ ಬ್ಯಾನರ್ಗೆ ಹೂವಿನ ಅಲಂಕಾರದಿಂದ ಮೌನಾಚರಣೆ ಜೊತೆಯಲ್ಲಿ ಕ್ಯಾಂಡಲ್ ಹಚ್ಚುವ ಮೂಲಕ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿ ಬಳಗದವರು, ವಾಲ್ಮೀಕಿ ಸಂಘದ ಯುವಕರು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಘದವರು, ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು…
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030