ಸತತ ಅಧ್ಯಯನದಿಂದ ಯಶಸ್ಸು ಸಾಧ್ಯ ಉಪನ್ಯಾಸಕ ಪ್ರಭು ಸೊಪ್ಪಿನ ಅಭಿಮತ
ಹೂವಿನ ಹಡಗಲಿ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಸತತ ಅಧ್ಯಯನ ಅವಶ್ಯಕ ಎಂದು ಉಪನ್ಯಾಸಕ ಪ್ರಭು ಸೊಪ್ಪಿನ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಶಾಖಾ ಗ್ರಂಥಾಲಯದಲ್ಲಿ ಶನಿವಾರ
ಗ್ರಂಥಾಲಯ ಇಲಾಖೆ, ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ, ಇತಿಹಾಸ, ಭೂಗೋಳ, ವಿಜ್ಞಾನ, ಗಣಿತ,
ಸಾಮಾನ್ಯ ಅಧ್ಯಯನ, ದೇಶ ವಿದೇಶ, ರಾಜ್ಯ, ರಾಷ್ಟ್ರ ಹೀಗೆ ವಿವಿಧ ವಿಷಯಗಳ ಕುರಿತು
ನಿಖರ ಅಧ್ಯಯನ ಮಾಡಬೇಕು ಎಂದು ಹೇಳಿದರು.
ಸಮಯ ಪಾಲನೆ ಅತಿ ಮುಖ್ಯ.
ಪರೀಕ್ಷೆಯಲ್ಲಿ ಎಲ್ಲರಿಗೂ ಒಂದೇ ಸಮಯ ಇರುತ್ತದೆ.
ಅಂಕಗಳಿಗೆ ಅನುಗುಣವಾಗಿ ಸಮಯ ಹೊಂದಿಸಿಕೊಂಡು ಉತ್ತರ ನೀಡಬೇಕು ಎಂದರು.
ಬಹುಆಯ್ಕೆ ಪ್ರಶ್ನೆಗಳಿಗೆ ಉತ್ತರಿಸುವ ಕೌಶಲ್ಯ ಬೆಳೆಸಿಕೊಳ್ಳಿ. ಇರುವ ನಾಲ್ಕು ಉತ್ತರಗಳಲ್ಲಿ ಒಂದನ್ನು ಆಯ್ಕೆ
ಮಾಡುವಾಗ ನಿಖರ ಉತ್ತರ ಬರೆಯಿರಿ ಎಂದು ತಿಳಿಸಿದರು.
ಶಾಖಾ ಗ್ರಂಥಾಲಯಾಧಿಕಾರಿ ಮಂಜುನಾಥ ಬೋವಿ ಇಲಾಖೆಯ ವತಿಯಿಂದ ಪ್ರತಿ ತಿಂಗಳು ಎರಡು ಮತ್ತು ನಾಲ್ಕನೇ ಶನಿವಾರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಕುರಿತು ಉಪನ್ಯಾಸ ಏರ್ಪಡಿಸಲಾಗುವುದು. ಯುವಕರು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು
ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು…
ವರದಿ.. ಮ್ಯಾಗೇರಿ ಸಂತೋಷ ಹೂವಿನಹಡಗಲಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030