ನೆಹರು ಯುವ ಕೇಂದ್ರ ಚಿತ್ರದುರ್ಗ ಶ್ರೀ ಆದರ್ಶ ಯುವಕ ಸಂಘ (ರಿ) ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದೇವರಾಜ ಅರಸು ಕೈಗಾರಿಕಾ ತರಬೇತಿ ಸಂಸ್ಥೆ ಹೊಳಲ್ಕೆರೆ ಸಹಯೋಗದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ದೇವರಾಜ ಅರಸು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ// ರೇಖಾ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಮತದಾನ ಒಂದು ರಾಷ್ಟ್ರದ ಅಭ್ಯುದಯಕ್ಕೆ ಪೂರಕವಾಗಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಎಲ್. ಕೆ.ಶಿವಕುಮಾರ್ ಉತ್ತಮನಾಯಕನ ಆಯ್ಕೆಗಾಗಿ ಮತದಾನವು ಅತ್ಯಂತ ಶ್ರೇಷ್ಠವಾಗಿದ್ದು ಒಮ್ಮೆ ಮತದಾನ ಮಾಡಿದರೆ ಐದು ವರ್ಷಗಳ ಕಾಲ ಬದಲಾವಣೆ ಮಾಡಲು ಸಾಧ್ಯವಿಲ್ಲದ ಕಾರಣ ಚುನಾವಣಾ ಸಂದರ್ಭದಲ್ಲಿ ಸಮರ್ಥ ನಾಯಕನ ಆಯ್ಕೆ ಸೂಕ್ತ ಎಂದರು ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತುಅಧ್ಯಕ್ಷರಾದ ಎನ್. ಶಿವಮೂರ್ತಿ ಯಾವುದೇ ಆಮಿಷಕ್ಕೆ ಬಲಿಯಾಗದೆ ನಿರ್ಭೀತಿಯಿಂದ ಮತದಾನ ಮಾಡಿ ಮೂಲಭೂತ ಸೌಕರ್ಯಗಳಾದ ಶಿಕ್ಷಣ.ಆರೋಗ್ಯ.ಶುದ್ಧ ಕುಡಿಯುವ ನೀರು ಪಡೆಯಲು ಉತ್ತಮ ನಾಯಕನ ಆಯ್ಕೆ ಅತೀ ಮುಖ್ಯ ಈ ದಿಶೆಯಲ್ಲಿ ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು ವಕೀಲರ ಸಂಘದ ಉಪಾಧ್ಯಕ್ಷರಾದ ಎಚ್ ರಮೇಶ್ ಕಾರ್ಯದರ್ಶಿಗಳಾದ ಎಸ್ ಸಿದ್ದೇಶ್ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಆರ್ ಅಣ್ಣಪ್ಪ ತಾಲೂಕು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಣ್ಣ ಹಿರಿಯ ಆರೋಗ್ಯ ನಿರೀಕ್ಷಕರಾದ ರಂಗನಾಥ್, ಶ್ರೀನಿವಾಸ್.ದೇವರಾಜ್ ಅರಸು ಕಾಲೇಜಿನ ಶ್ರೀ ಜಗನ್ನಾಥ್ ಹಾಗೂ ಉಪಸ್ಥಿತರಿದ್ದರು…
ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030