ಹೊಳಲ್ಕೆರೆ ತಾಲ್ಲೂಕಿನ ಆರ್, ನುಲೆನೂರು ಗ್ರಾಮ ಪಂಚಾಯ್ತಿಯಲ್ಲಿ ಶುಕ್ರವಾರ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ 2024 -25ನೇ ಸಾಲಿನ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆಯನ್ನು ನಡೆಸಲಾಯಿತು. ಸಾಮಾಜಿಕ ಅಧಿಕಾರಿಯಾದ ರಂಜಿತ್ ಮಾತನಾಡಿ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾಯತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಇನ್ನು ಹಲವು ಇಲಾಖೆಗಳಲ್ಲಿ ರೈತರಿಗೆ ಉದ್ಯೋಗ ಖಾತರಿ ಯೋಜನೆಯಡಿ ಅನೇಕ ಯೋಜನೆಗಳು ಇವೆ ಈ ಯೋಜನೆಗಳನ್ನು ರೈತರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನೋಡಲ್ ಅಧಿಕಾರಿಯಾದ ಚನ್ನಬಸಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ವೀಣಾ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾದ ಯಶವಂತ್, ಕಾರ್ತದರ್ಶಿಗಳಾದ ಹನುಮಂತಪ್ಪ, ಹಾಗೂ ಗ್ರಾಮಸ್ಥರು ಸಭೆಯಲ್ಲಿ ಹಾಜರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030