ಓಂ ಶ್ರೀ ಮಂಜುನಾಥಯ ನಮಃ
“ ಗಿಡ ನೆಟ್ಟು ಬರ ಅಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 2000 ಸಸಿ ನಾಟಿ ಮಾಡಲಾಯಿತು.”
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಹೊಳಲ್ಕೆರೆ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಆವರಣದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ಈ ಒಂದು ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀಯುತ ಓಂಕಾರಪ್ಪ ರವರು ಸಸಿ ನಾಟಿ ಮಾಡಿ ನೀರು ಹಾಕುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಡು ಬೆಳೆಸಿ ನಾಡು ಉಳಿಸಿ ಅನ್ನುವ ಘೋಷ್ಯ ವಾಕ್ಯದೊಂದಿಗೆ ಕಾಡಿನಿಂದ ಆಗುವ ಉಪಯೋಗದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಯುತ ಮೋಹನ್ ನಾಗರಾಜ್ ಸರ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾತನಾಡುತ್ತಾ ಸದರಿ ವಸತಿ ಶಾಲೆಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಿದ 2000 ಸಸಿಗಳನ್ನು ಜನಜಾಗೃತಿ ವೇದಿಕೆಯವರು ದತ್ತು ಪಡೆದು ಪೋಷಣೆ ಮಾಡಿ ಶಾಲೆಯ ಉಪಯೋಗಕ್ಕಾಗಿ ಹಸ್ತಾಂತರ ಮಾಡುವುದಾಗಿ ತಿಳಿಸಿದರು.
ಒಂದು ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ನಿರ್ದೇಶಕರಾದ ಶ್ರೀಯುತ ದಿನೇಶ್ ಪೂಜಾರಿ ಸರ್ ಹಾಗೂ ಜಿಲ್ಲೆಯ ಎಲ್ಲಾ ಯೋಜನಾಧಿಕಾರಿಗಳು ಮತ್ತು ಹಿರಿಯೂರು ಜಿಲ್ಲಾ ಕಛೇರಿಯ ನಿರ್ದೇಶಕರಾದ ಶ್ರೀಯುತ ವಿನಯ್ ಕುಮಾರ್ ಸರ್ ಹಾಗೂ ಯೋಜನಾಧಿಕಾರಿಗಳು ಮತ್ತು ಪ್ರಾದೇಶಿಕ ಕಚೇರಿಯ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಶ್ರೀ ನಾಗರಾಜ್ ಸರ್ ಹಾಗೂ ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ಜಗದೀಶ್ ಸರ್ ಹಾಗೂ ಶಿಕ್ಷಕ ವೃಂದ ಹಾಗೂ ಮುದ್ದು ಮಕ್ಕಳು ಮತ್ತು ಜಿಲ್ಲಾ ಜನಜಾಗೃತಿ ವೇದಿಕೆಯ ಎಲ್ಲಾ ಸರ್ವ ಸದಸ್ಯರು ಮತ್ತು ಕೃಷಿ ಮೇಲ್ವಿಚಾರಕ ಶ್ರೀ ತೋಟಯ್ಯ m b ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030