ಹೂಡೇಂ ಗ್ರಾ.ಪಂ ಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ…!!!

Listen to this article

ಹೂಡೇಂ ಗ್ರಾ.ಪಂ ಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಕಾನ ಹೊಸಹಳ್ಳಿ: ಸಮೀಪದ ಹೂಡೇಂ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಅವರ 515ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಬಿವೃದ್ಧಿ ಅಧಿಕಾರಿ ಚಂದ್ರಪ್ಪ ಮಾತನಾಡಿ ನಾಡಪ್ರಭು ಕೆಂಪೇಗೌಡ ಅವರು 16ನೇ ಶತಮಾನದಲ್ಲಿಯೇ ಬೆಂಗಳೂರು ಪಟ್ಟಣದ ನಿರ್ಮಾಣಕ್ಕೆ ಅಡಿಗಲ್ಲನ್ನು ಹಾಕಿದ್ದರು. ಅಂದಿನ ಕಾಲದಲ್ಲಿ ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ರಾಜ್ಯದ ರಾಜಧಾನಿ ಬೆಂಗಳೂರು ನಗರವನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಿದ ಮಹಾನ್ ಹೋರಾಟಗಾರ ಬೆಂಗಳೂರಿನ ಸುತ್ತ ಮುತ್ತ ಯಾವುದೇ ನದಿಯ ಆಸರೆ ಇಲ್ಲವಾಗಿರುವುದರಿಂದ ಅನೇಕ ಕೆರೆಕಟ್ಟೆ ,ನಿರ್ಮಿಸಿ ಕೃಷಿ ಮತ್ತು ಅಭಿವೃದ್ಧಿಗೆ ದಾರಿ ದೀಪವಾಗಿದ್ದಾರೆ. ಅವರನ್ನು ಕೇವಲ ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸದೆ ಎಲ್ಲರೂ ಗೌರವಿಸಬೇಕು ಎಂದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ತಿಪ್ಪೇರುದ್ರಪ್ಪ, ಗ್ರಾ‌ಮ ಪಂಚಾಯತಿ ಸದಸ್ಯರಾದ ಕುಮಾರ್ ರೆಡ್ಡಿ, ಸುಂದರಮ್ಮ ಮಲ್ಲಿಕಾರ್ಜುನ್, ಬಿಲ್ ಕಲೆಕ್ಟರ್ ಮಂಜಣ್ಣ, ಗ್ರಂಥಾಲಯ ಮೇಲ್ವಿಚಾರಕ ಟಿ ಗುರುರಾಜ್, ಸಿಬ್ಬಂದಿ ದಕ್ಷಿಣ ಮೂರ್ತಿ, ಕಂಪ್ಯೂಟರ್ ಆಪರೇಟರ್ ತಿಪ್ಪೇಸ್ವಾಮಿ, ಕಾಯಕ ಮಿತ್ರ ಗಂಗಮ್ಮ, ವಿಆರ್ ಡಬ್ಲ್ಯೂ ಸಲ್ಮಾ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend