ರಾಷ್ಟ್ರೀಯ ಹೆಮ್ಮೆಯ ಕೈಗಾರಿಕೋದ್ಯಮಿ ಶ್ರೀ ರತನ್ ಟಾಟಾ ಅವರ ಆತ್ಮಕ್ಕೆ ಶಾಂತಿ ಕೋರಿದ – ವಸತಿ ಸಚಿವ ಬಿ. ಝಡ್. ಜಮೀರ್ ಅಹಮದ್ ಖಾನ್…
ಭಾರತದ ಕೈಗಾರಿಕೋದ್ಯಮಿ ಮತ್ತು ಮಾನವೀಯ ನಾಯಕರಾದ ಶ್ರೀ ರತನ್ ಟಾಟಾ ಜೀ ಅವರು ದೇಶದ ಪ್ರಗತಿಗಾಗಿ ನೀಡಿರುವ ಕೊಡುಗೆಗಳು ಅಪಾರ ಮತ್ತು ಅಮೂಲ್ಯವಾದವು. ಅವರ ಅಗಲಿಕೆ ದೇಶಕ್ಕೆ ತುಂಬಲಾಗದ ನಷ್ಟ ಹಾಗೂ ಆಳವಾದ ದುಃಖವನ್ನುಂಟು ಮಾಡಿದೆ*. ಭಗವಂತ ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂಬ ನಿಟ್ಟಿನಲ್ಲಿ ದಿನಾಂಕ; 10-10-2024 ರಂದು *ಕೂಡ್ಲಿಗಿ ಪಟ್ಟಣದ ರಾಜ ವೀರ ಮದಕರಿ ನಾಯಕ ವೃತ್ತದಲ್ಲಿ ಶ್ರೀ ರತನ್ ಟಾಟಾ ಜೀ ಅವರ ಭಾವ ಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರು ಹಾಗೂ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್.ಟಿ ಅವರು ಹೂಮಾಲೆ ಧರಿಸಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧೆಯಿಂದ ಗೌರವ ಸಲ್ಲಿಸಿದರು*. ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಎಂ. ಎಸ್. ದಿವಾಕರ್, ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ ನೋಂಗ್ಜಾಯ್ ಮಹದ್ ಅಕ್ರಮ್ ಆಲಿ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಹರಿಬಾಬು, ಕೂಡ್ಲಿಗಿ ಸರ್ಕಲ್ ಇನ್ಸ್ ಪೆಕ್ಟರ್ ಸುರೇಸ ತಳವಾರ, ಉಪತಶೀಲ್ದಾರರಾದ ನೇತ್ರಾವತಿ, ಕೂಡ್ಲಿಗಿ ಪ. ಪಂ. ಅಧ್ಯಕ್ಷರಾದ ಶ್ರೀ ಕಾವಲ್ಲಿ ಶಿವಪ್ಪನಾಯಕ, ಉಪಾಧ್ಯಕ್ಷರಾದ ಲೀಲಾವತಿ ಕೆ. ಪ್ರಭಾಕರ್, ಸ್ಥಾಯಿ ಸಮಿತಿಯ ಸದಸ್ಯರಾದ ಸಯ್ಯದ್ ಶೂಕರ್ ಅಹಮದ್, ಸರ್ವ ಸದಸ್ಯರು, ಕೂಡ್ಲಿಗಿ ಬ್ಲಾಕ್ ಅಧ್ಯಕ್ಷರಾದ ಶ್ರೀ ಗುರುಸಿದ್ಧನಗೌಡ, ಕಾಂಗ್ರೆಸ್ ಪಕ್ಷದ ವಕ್ತಾರ ಜಿಲಾನ್, ಮುಖಂಡರಾದ ಜಿಂಕಲ್ ನಾಗಮಣಿ, ಸೂಲದಹಳ್ಳಿ ಸಿದ್ದಪ್ಪ, ಉದಯ ಜನ್ನು, ಇನ್ನೂ ಮುಂತಾದ ಮುಖಂಡರು ಉಪಸ್ಥಿತರಿದ್ದರು…
ವರದಿ. ಅನಿಲ್ ಕುಮಾರ್ ಹುಲಿಕುಂಟೆ, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030