ಇದೆ ತಿಂಗಳ 6ನೇ ತಾರೀಕಿನೊಳಗೆ ಸಚಿವ ನಾಗೇಂದ್ರ ರಾಜೀನಾಮೆ ಕೊಡದೆ ಹೋದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ, ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷರಾದ ಬಂಗಾರು ಹನುಮಂತು…!!!

Listen to this article

ರಾಜ್ಯಾದ್ಯಂತ ಉಗ್ರ ಪ್ರತಿಭಟನೆ:
ಬಂಗಾರು ಹನುಮಂತು
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರೀ ಹಗರಣದ ಸಂಬಂಧ ಇದೇ 6ರೊಳಗೆ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಡದೆ ಇದ್ದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಎಸ್.ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಎಚ್ಚರಿಕೆ ನೀಡಿದರು.


ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜೊತೆ ಮಾತನಾಡಿದ್ದೇವೆ. ಅವರು ಇದೇ 6ರಂದು ಸಚಿವ ನಾಗೇಂದ್ರರ ರಾಜೀನಾಮೆಗೆ ಗಡುವು ನೀಡಿದ್ದಾರೆ ಎಂದರು. ಅಲ್ಲದೆ, ಮುಂದಿನ ಹೋರಾಟದ ಕುರಿತು ವಿಜಯೇಂದ್ರ ಅವರ ಮಾರ್ಗದರ್ಶನ ಪಡೆಯಲಿದ್ದೇವೆ ಎಂದು ತಿಳಿಸಿದರು.
ಘಟನೆಯನ್ನು ಖಂಡಿಸಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಿದ್ದೇವೆ. ನಿನ್ನೆ ಬಳ್ಳಾರಿಯಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿದ್ದೇವೆ. ಹಗರಣದ ಸಿಬಿಐ ತನಿಖೆಗೆ ಆಗ್ರಹಿಸಿ ಇವತ್ತು ಮೋರ್ಚಾ ಮತ್ತು ಸಮಾಜದ ಕಡೆಯಿಂದ ಸರಕಾರಕ್ಕೆ ಒತ್ತಡ ಹೇರಲಿದ್ದೇವೆ ಎಂದು ಅವರು ತಮ್ಮ ಒಂದು ಕಾರ್ಯಕ್ರಮದಲ್ಲಿ ಪ್ರಕಟಿಸಿದರು….

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend