ಶಿಸ್ತು,ತಾಳ್ಮೆ ಮೈಗೂಡಿಸಿಕೊಳ್ಳಲು ಯೋಗ ಸಹಕಾರಿ :: ಡಾ. ಎ. ಕರಿಬಸಪ್ಪ…!!!

Listen to this article

ಶಿಸ್ತು,ತಾಳ್ಮೆ ಮೈಗೂಡಿಸಿಕೊಳ್ಳಲು ಯೋಗ ಸಹಕಾರಿ :: ಡಾ. ಎ. ಕರಿಬಸಪ್ಪ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಗಡಿಗ್ರಾಮ ಕೆಂಚಮಲ್ಲನಹಳ್ಳಿ ಸರ್ಕಾರಿ ಪ್ರೌಢಶಾಲೆ ಯ ಆವರಣದಲ್ಲಿ ಯೋಗ ಶಿಬಿರ ಆಯೋಜಿಸಲಾಗಿತ್ತು.
ಡಾ. ಎ. ಕರಿಬಸಪ್ಪ ಮಾತನಾಡಿ ಪ್ರತಿದಿನ ಯೋಗ ಮಾಡುವುದನ್ನು ಅಭ್ಯಾಸ ಮಾಡಿದಲ್ಲಿ ಜ್ಞಾನವನ್ನು ವೃದ್ಧಿಸಿಕೊಳ್ಳುವ ಜೊತೆಗೆ ಶಿಸ್ತು ಸಂಯಮ ಹಾಗೂ ತಾಳ್ಮೆಯನ್ನು ಮೈಗೂಡಿಸಿಕೊಂಡು ದೇಹದ ಅಂಗಾಂಗಗಳನ್ನು ಸುಸ್ಥಿತಿಯಲ್ಲಿಟ್ಟು ಕೊಳ್ಳಬಹುದು ಎಂದು ತಿಳಿಸಿದರು.
ಪ್ರತಿಯೊಬ್ಬರು ನಿತ್ಯ ಕನಿಷ್ಠ ಒಂದು ಗಂಟೆ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಆರೋಗ್ಯವಂತ ಜೀವನ ನಡೆಸಬಹುದು.ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಯೋಗಾಭ್ಯಾಸವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿನಿತ್ಯ ಕನಿಷ್ಠ ಒಂದು ಗಂಟೆ ಅಭ್ಯಾಸ ಮಾಡುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಯೋಗ ದಿನಾಚರಣೆ ಯಲ್ಲಿ ಶಾಲೆಯ ಶಿಕ್ಷಕರಾದ ತಿಪ್ಪೇಸ್ವಾಮಿ , ಚೆನ್ನಬಸವಣ್ಣ , ಹರ್ಷ ವರ್ಧನ ,ರವಿಕುಮಾರ , ಡಾ.ಎ.ಕರಿಬಸಪ್ಪ ,ರಂಗನಾಯ್ಕ, ಹನುಮಂತ ಕುಮಾರ್,.ಗ್ರಾಮದ ಯುವ ಮುಖಂಡರಾದ ಕೆ. ಜಿ. ಬಸವರಾಜ, ಸೇರಿ ಅನೇಕರು ಯೋಗ ದಿನಾಚರಣೆಯ ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend