ಕೂಡ್ಲಿಗಿ:ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಸೌಕರ್ಯ ಕಲ್ಪಿಸಿ ABVP ಒತ್ತಾಯ…-ವಿಜಯನಗರ ಜಿಲ್ಲೆ ಕೂಡ್ಲಿಗಿ:ಜೂ27_ಪಟ್ಟಣ ಸೇರಿದಂತೆ ತಾಲೂಕಿನ ವಿದ್ಯಾರ್ಥಿಗಳಿಗೆ, ಶೈಕ್ಷಣಿಕ ವರ್ಷದಲ್ಲಿ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು. ಸಮರ್ಪಕವಾಗಿ ಸಕಾಲಕ್ಕೆ ಒದಗಿಸಿಕೊಡುವಂತೆ ಕ್ರಮ ಜರುಗಿಸಬೇಕೆಂದು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೂಡ್ಲಿಗಿ ಘಟಕ ಹಕ್ಕೊತ್ತಾಯ ಮಾಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸಬೇಕು, ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಬೇಡಿಕೆಗನುಗುಣವಾಗಿ. ಬಸ್ ಸೌಕರ್ಯ ಸಮರ್ಪಕವಾಗಿ ಕಲ್ಪಿಸಿಕೊಡಬೇಕೆಂದು ಸೇರಿದಂತೆ, ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ABVP ಹಕ್ಕೊತ್ತಾಯ ಪತ್ರವನ್ನು ಸರ್ಕಾರಕ್ಕೆ ನೀಡಿದೆ. ABVPಕಾರ್ಯಕರ್ತರು ವಿವಿದ ಕಾಲೇಜ್ ವಿದ್ಯಾರ್ಥಿಗಳ ಸಹಯೋಗದೊಂದಿಗೆ, ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಮಹಾತ್ಮ ಗಾಂಧೀಜಿ ಸ್ಮಾರಕದಿಂದ ವಿದ್ಯಾರ್ಥಿಗಳ ಮೆರವಣಿಗೆ ಪ್ರಾರಂಭಗೊಂಡಿದ್ದು, ಘೋಷಣೆಗಳನ್ನು ಕೂಗುತ್ತಲೇ ಸಾಗಿದ ಮೆರವಣಿಗೆ. ಪಟ್ಟಣದ ಪ್ರಮಖ ರಸ್ತೆಗಳಲ್ಲಿ ವೃತ್ತಗಳಲ್ಲಿ ಸಂಚರಿಸಿ, ತಾಲೂಕಾಡಳಿತ ಸೌಧ ಸೇರಿತು. ನಂತರ ತಹಶಿಲ್ದಾರರ ಮುಖಾಂತರ ಸರ್ಕಾರಕ್ಕೆ, ತಮ್ಮ ಹಕ್ಕೊತ್ತಾಯ ಪತ್ತ ನೀಡಿದರು. ABVP ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ವಿವಿದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು..
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030