ದಿನಾಂಕ 5.7.2024ರಂದು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ
ಶ್ರೀ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ
ಶ್ರೀ ಡಿ ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರಾಜ್ಯ ಪರಿಷತ್ ಅಭಿವೃದ್ಧಿ ಸಭೆಯಲ್ಲಿ(ಎಸ್ ಇಪಿ/ಟಿಎಸ್ ಪಿ)ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರಾಜ್ಯ ಪರಿಷತ್ ಅಭಿವೃದ್ಧಿ ಸಭೆಯ ಸದಸ್ಯರು ಹಾಗೂ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ಭಾಗವಹಿಸಿ ರಾಜ್ಯದಲ್ಲಿ ಈ ಸಮುದಾಯಗಳಿಗೆ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಹಾಗೂ ಅವಶ್ಯಕವಾಗಿರುವ ಅಮೂಲ್ಯ ಸಲಹೆಗಳನ್ನು ನೀಡಿ ತಾವು ಯಾವಾಗಲೂ ಈ ಸಮುದಾಯಗಳಿಗೆ ಸಿಗಬೇಕಾದ ಸೌಲಭ್ಯಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ
ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಸಚಿವರಾದ *ಹೆಚ್ ಸಿ ಮಹದೇವಪ್ಪನವರು ಮತ್ತು ಸಂಸದರು, ಶಾಸಕರು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030