ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು: ಡಾ. ಶ್ರೀನಿವಾಸ್ ಎನ್ ಟಿ…!!!

Listen to this article

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು: ಡಾ. ಶ್ರೀನಿವಾಸ್ ಎನ್ ಟಿ
ದಿ: 20.07.2024 ರಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ತಾಲೂಕಿನ ನರಸಿಂಹಗಿರಿ, ಹುಲಿಕುಂಟೆ ಮಧ್ಯದ ಕರಡಿಹಳ್ಳಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಡಾಂಬರೀಕರಣ ರಸ್ತೆ(6 ಕೋಟಿ ವೆಚ್ಚದಲ್ಲಿ) ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿ,
ಗ್ರಾಮಸ್ಥರ ಬಹುದಿನದ ಬೇಡಿಕೆಗೆ ಸ್ಪಂದಿಸಿ, ರಾಜ್ಯ ಸರ್ಕಾರದ ಸಹಕಾರದೊಂದಿಗೆ ಅಭಿವೃದ್ಧಿಯ ಮೂಲಕ ಕ್ಷೇತ್ರದ ಜನತೆಯ ಋಣ ತೀರಿಸಲು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ :
ಪ್ರಗತಿ ಯೋಜನೆ ಅಡಿಯಲ್ಲಿ ಚಂದ್ರಶೇಖರಪುರ, ನೆಲ ಬೊಮ್ಮನಹಳ್ಳಿ, ಕಡೇಕೋಳ, ತಾಯಕನಹಳ್ಳಿ ಗ್ರಾಮಗಳಲ್ಲಿ
ಕಾಂಕ್ರೀಟ್ ಸಿಮೆಂಟ್ ರಸ್ತೆ ಹಾಗೂ ಚರಂಡಿ(1 ಕೋಟಿ ವೆಚ್ಚದಲ್ಲಿ) ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಬೆಳ್ಳಿಗಟ್ಟೆ, ರಾಮದುರ್ಗ ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು ಹಾಗೂ ಸರ್ವ ಸದಸ್ಯರು ಮತ್ತು ಗ್ರಾಮಗಳ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend