ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ದಿ;10-10-2024 ರಂದು ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ
ಅಂಗವಾಗಿ ಸನ್ಮಾನ್ಯ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು
ಬಾಪೂಜಿ ಪ್ರಬಂಧ ಸ್ಪರ್ಧೆ, ವಿಜೇತರಿಗೆ ಬಹುಮಾನ ವಿತರಣೆ,
ಗಾಂಧಿ ಪ್ರಿಯ ಭಜನೆಗಳ ಗಾಯನ, ಬಹುಮಾನ ವಿತರಣೆ, ವಿಶೇಷ ಉಪನ್ಯಾಸ, ಮತ್ತು ಖಾದಿ ವಸ್ತು ಪ್ರದರ್ಶನ ಕಾರ್ಯಗಳನ್ನು ಉದ್ಘಾಟಿಸಿದರು.
ಸಚಿವರು ಮಾತನಾಡುತ್ತಾ, ವರ್ತಮಾನದಲ್ಲಿ ಗಾಂಧೀಜಿಯವರ ತತ್ವ ಮತ್ತು ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಜಿಲ್ಲಾಧಿಕಾರಿಗಳಾದ ಎಂ.ಎಸ್. ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಹರಿಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಇಮಾಮಿ ನಿಯಾಜಿ ಅವರು ಇನ್ನೂ ಮುಂತಾದವರು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030