ವಚನ ಯುಗದ ಆಧ್ಯಾತ್ಮಿಕ ಚಿಂತನೆಗಳ ರೂವಾರಿ ಹಡಪದ ಅಪ್ಪಣ್ಣ: ಪ್ರೋ .ಎಸ್.ಮಂಜುನಾಥ…!!!

Listen to this article

ವಚನ ಯುಗದ ಆಧ್ಯಾತ್ಮಿಕ ಚಿಂತನೆಗಳ ರೂವಾರಿ ಹಡಪದ ಅಪ್ಪಣ್ಣ: ಪ್ರೋ .ಎಸ್.ಮಂಜುನಾಥ

ಬಳ್ಳಾರಿ:ಹನ್ನೆರಡನೆ ಶತಮಾನದ ವಚನ ಯುಗದ ಜನಸಾಮಾನ್ಯರಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತಿದವರು ಶಿವಶರಣ ಹಡಪದ ಅಪ್ಪಣ್ಣ ಎಂದು ಕಿಷ್ಕಿಂದ ವಿಶ್ವ ವಿದ್ಯಾಲಯದ ಭೌತವಿಜ್ಞಾನ ವಿಭಾಗದ ಪ್ರಾಧ್ಯಾಪಕರು ಮತ್ತು ಡೀನ್ ಆದ ಪ್ರೋ .ಎಸ್.ಮಂಜುನಾಥ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಹಡಪದ ಅಪ್ಪಣ್ಣನವರು ಪ್ರಸ್ತುತ ದಿನಮಾನಗಳ ಮನುಷ್ಯರ ಮನೋಭಾವನೆಯನ್ನು ಅಂದೇ ತಮ್ಮ ವಚನಗಳ ಮೂಲಕ ಸಾಬೀತು ಪಡಿಸಿದ್ದಾರೆ ಎಂದರು.
ಹಡಪದ ಅಪ್ಪಣ್ಣ ಅವರು ಯುವ ಕವಿಗಳ ಸ್ಪೂರ್ತಿ ಆಗಿದ್ದು, ಜೀವನದ ಬಗ್ಗೆ ಅರಿವು ಮೂಡಿಸುವ ಅವರ ವಚನಗಳೆ ನಿದರ್ಶನವಾಗಿವೆ ಎಂದು ಹೇಳಿದರು.
ಜನಸಾಮಾನ್ಯರು ತಮ್ಮ ಜೀವನದ ತಾತ್ಪರ್ಯ ತಿಳಿದುಕೊಂಡು, ಗುರು ಹಿರಿಯರಿಗೆ ವಂದಿಸಿ, ವಿನಯದಿಂದ ಜೀವನ ನಡೆಸಬೇಕೆಂಬುದು ಶಿವಶರಣ ಹಡಪದ ಅಪ್ಪಣ್ಣನವರ ಆಶಯವಾಗಿತ್ತು ಎಂದು ಹೇಳಿದ ಅವರು, ಕೆಲವೊಂದು ವಚನಗಳ ಸ್ವಾರಸ್ಯವನ್ನು ಇದೇ ಸಂದರ್ಭದಲ್ಲಿ ವಿವರಿಸಿದರು.


ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಜಂಗಮ ಹೊಸಳ್ಳಿಯ ಪುರವರ್ಗ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮಿಜಿ ಅವರು ಮಾತನಾಡಿ, ಶಿವಶರಣ ಅಪ್ಪಣ್ಣ ನವರು ಕಾಯ, ವಾಚ, ಮನಸ್ಸಿನಿಂದ ಭಕ್ತಿಪೂರ್ವಕವಾಗಿ ನ್ಯಾಯ ಹಾಗೂ ಧರ್ಮದ ಗೌರವ ಸಂಪಾದನೆ ಮಾಡಿದರು ಎಂದು ಹೇಳಿದರು.
ಹನ್ನೆರಡನೇ ಶತಮಾನದ ಪ್ರಸಿದ್ದ ವಚನಕಾರರಲ್ಲಿ ಒಬ್ಬರಾದ ಹಡಪದ ಅಪ್ಪಣ್ಣನವರು ತಮ್ಮ ವಚನ ತತ್ವಾದರ್ಶಗಳ ಮೂಲಕ ಸೂರ್ಯ ಚಂದ್ರ ಇರುವವರೆಗೂ ಅಜರಾಮರವಾಗಿರುತ್ತಾರೆ ಎಂದರು.
ಜಗಜ್ಯೋತಿ ಬಸವಣ್ಣನವರ ಅನುಯಾಯಿ ಹಾಗೂ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಅಪ್ಪಣ್ಣನವರು ಸಮಾಜದಲ್ಲಿ ಸಮಾನತೆ, ಐಕ್ಯತೆ ಹಾಗೂ ಒಗ್ಗಟ್ಟಿನ ಸಾರವನ್ನು ತಮ್ಮ ವಚನಗಾಯನಗಳ ಮುಖಾಂತರ ಸಾರಿ, ಸಮಾಜ ಪರಿವರ್ತನೆಯಾಗುವಲ್ಲಿ ಶ್ರಮವಹಿಸಿದರು ಎಂದು ಹೇಳಿದರು.
ಶಿವಶರಣ ಹಡಪದ ಅಪ್ಪಣ್ಣನವರಂತೆ ಮನುಷ್ಯರು ಮಾನವೀಯ ಗುಣ, ನೀತಿ ಮೌಲ್ಯಗಳನ್ನು ಅಳವಡಿಸಿಕೊಂಡು ಮಾದರಿ ಜೀವನ ನಡೆಸಬೇಕು ಎಂದು ಹೇಳಿದರು.
ಈ ವೇಳೆ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಕೆ.ವಸಂತ್‍ಕುಮಾರ್ ಅವರ ತಂಡದಿಂದ ವಚನ ಸಂಗೀತ ಆಯೋಜಿಸಲಾಗಿತ್ತು.


ಮೆರವಣಿಗೆ:
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರದೊಂದಿಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಭವ್ಯ ಮೆರವಣಿಗೆ ಜರುಗಿತು.
ಈ ಸಂಧರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಂಘದ ಜಿಲ್ಲಾಧ್ಯಕ್ಷ ಹೆಚ್.ರುದ್ರಪ್ಪ, ಸಮಾಜದ ಮುಖಂಡರಾದ ಸಿ.ಕೊಟ್ರೇಶ, ಹೆಚ್.ತಿಪ್ಪೇಸ್ವಾಮಿ ಸೇರಿದಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿ, ಸವಿತಾ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು…

 

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend