ಗುಳೇದಗುಡ್ಡದ ತಹಶೀಲ್ದಾರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ ನಡೆಯಿತು…!!!

Listen to this article

78ನೇ ಸ್ವಾತಂತ್ರ್ಯೋತ್ಸವ ಅದ್ದೂರಿ ಆಚರಣಗೆ ಸಿದ್ಧತೆ
ಗುಳೇದಗುಡ್ಡ: ತಾಲೂಕು ಆಡಳಿತದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಸರಕಾರಿ ಬಾಲಕರ ಪಪೂ ಕಾಲೇಜಿನ ಮೈದಾನದಲ್ಲಿ ಧ್ವಜಾರೋಹಣ, ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ ಮಂಗಳಾ ಎಂ ಹೇಳಿದರು.
ಅವರು ಇಲ್ಲಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಗಷ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಬಾಲಕರ ಸರಕಾರಿ ಪಪೂ ಕಾಲೇಜು ಮೈದಾನದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆಸಲ್ಲಿಸಿದ ಸಿಬ್ಬಂದಿ, ಪತ್ರಕರ್ತರು ಹಾಗೂ ಸ್ವಾತಂತ್ರ್ಯಯೋಧರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿಗೀತೆ, ಏಕಪಾತ್ರಾಭಿನಯ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಸಭೆಯಲ್ಲಿ ಪುರಸಭೆ ಮ್ಯಾನೇಜರ ಎ.ಎಚ್. ಮುದ್ದೇಬಿಹಾಳ, ಕ್ರೈಂ ಪಿಎಸ್‍ಐ ಸಿ.ವಿ. ಕಿರಿಶ್ಯಾಳ, ಬಾಲಕರ ಪಪೂ ಕಾಲೇಜಿನ ಪ್ರಾಚಾರ್ಯ ವಿಠ್ಠಲ ಕಳಸಾ, ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರ ಎ.ಕೆ. ಮಕಾನದಾರ, ಉಪಖಜಾನೆ ಆಧಿಕಾರಿ ಎಸ್.ಐ. ಹಿರೇಮಠ, ಡಾ. ಅನೀಲ ಉಕ್ಕಲಿ, ಸೇರಿದಂತೆ ವಿವಿಧ ಇಲಾಖೆ ಪ್ರತಿನಿಧಿಗಳು ಭಾಗವಹಿಸಿದ್ದರು…

ವರದಿ.ಸಚಿನ್ ಬಾಗಲಕೋಟ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend