ರಾಜ್ ಕುಟುಂಬದ ಕುಡಿ ಯುವರಾಜ್ ಅವರ ದಾಂಪತ್ಯದಲ್ಲಿ ಬಿರುಕು ವಿಚ್ಚೇದನ ಕೋರಿ ಕೌಟುಂಬಿಕ ನ್ಯಾಯದಲ್ಲಿ ಅರ್ಜಿ ಸಲ್ಲಿಕೆ…!!!

Listen to this article

ಬೆಂಗಳೂರು : ಡಾ. ರಾಜ್‌ ಕುಮಾರ್‌ ಅವರ ಕುಟುಂಬದ ಕುಡಿ ಗುರು ರಾಜ್‌ ಕುಮಾರ್‌ / ಯುವ ರಾಜ್‌ ಕುಮಾರ್‌ ಅವರ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಯುವ ರಾಜ್‌ ಕುಮಾರ್‌ ಅವರು ತಮ್ಮ ಪತ್ನಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಜೂ. 6 ರಂದು ವಿಚ್ಛೇದನಕ್ಕಾಗಿ ಯುವ ರಾಜ್‌ ಕುಮಾರ್‌ ಅವರು ತಮ್ಮ ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಜು. 4 ಕ್ಕೆ ವಿಚಾರಣೆ ನಿಗದಿ ಮಾಡಿದೆ. ಪತ್ನಿಯಿಂದ ಮಾನಸಿಕ ಕಿರಿಕಿರಿ ಉಂಟಾಗುತ್ತಿದ್ದು, ಆಕೆ ನನ್ನನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ ಎಂದು ಯುವ ರಾಜ್‌ ಕುಮಾರ್‌ ದೂರಿದ್ದಾರೆ. ಇದು ರಾಜ್‌ ಕುಮಾರ್‌ ಅವರ ಕುಟುಂಬದಲ್ಲಿ ಮೊದಲ ವಿಚ್ಛೇದನ ಪ್ರಕರಣವಾಗಿದೆ ಎಂದು ಮೂಲಗಳಿಂದ ತಿಳಿದಿದೆ.ಮೂಲತಃ ಮೈಸೂರಿನವರಾದ ಶ್ರೀದೇವಿಯವರನ್ನು ಯುವ ರಾಜ್‌ ಕುಮಾರ್‌ ಅವರು ಏಳು ವರ್ಷದ ಹಿಂದೆ ಪ್ರೀತಿಸುತ್ತಿದ್ದರು. ರಾಜ್‌ ಕುಟುಂಬದ ಸಿವಿಲ್‌ ಸರ್ವಿಸ್‌ ಅಕಾಡೆಮಿಯ ಉಸ್ತುವಾರಿ ವಹಿಸಿಕೊಂಡಿದ್ದ ಬಳಿಕ ಇವರಿಬ್ಬರ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಎರಡೂ ಕುಟುಂಬಗಳ ಸಮ್ಮತಿಯೊಡನೆ 4 ವರ್ಷಗಳ ಹಿಂದೆ ಇಬ್ಬರೂ ದಾಂಪತ್ಯಕ್ಕೆ ಕಾಲಿರಿಸಿದ್ದರು. ‌

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend