ಕಿಲ್ಲಿಂಗ್ ಸ್ಟಾರ್ ಅರೆಸ್ಟ್, ಪೊಲೀಸ್ ತನಿಖೆಯಲ್ಲಿ ಸಿಗಲಿದೆಯಾ…???ರೌಡಿ ಶಿಟರ್ ಅನ್ನುವ ಇನ್ನೊಂದು ಹೊಸ ಪಟ್ಟ…!!!

Listen to this article

ಬೆಂಗಳೂರು: ದರ್ಶನ್ ಗ್ಯಾಂಗ್​ನ ಅಮಾನುಷ ಕೃತ್ಯಕ್ಕೆ ಬಲಿಯಾದ ರೇಣುಕಾ ಸ್ವಾಮಿಯನ್ನು ಕೂಡಿ ಹಾಕಿದ್ದ ರಾಜರಾಜೇಶ್ವರಿ ನಗರದ ಶೆಡ್​ ನಲ್ಲಿ ಪೊಲೀಸರು ತಲಾಷೆ ನಡೆಸಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ದೊಡ್ಡ ಸಾಕ್ಷಿಗಳು ಅಲ್ಲಿ ದೊರೆಯಲಿವೆ. ಈಗಾಗಲೇ ಕಿಲ್ಲರ್ ದರ್ಶನ್ ಪೊಲೀಸರ ಈ ಅಪರಾಧಕ್ಕೆ ಬಳಕೆಯಾದಂತಹ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಈ ಕಾರಿನಲ್ಲಿ ಮದ್ಯದ ಬಾಟಲಿ ಹಾಗೂ ಮಹಿಳೆಯರ ವ್ಯಾನಿಟಿ ಬ್ಯಾಗ್ ಸಿಕ್ಕಿದೆ ಎನ್ನಲಾಗಿದೆ. ಈ ಬ್ಯಾಗ್‌ ಪವಿತ್ರಾ ಗೌಡ ಅವರಿಗೆ ಸೇರಿದ್ದು ಎನ್ನಲಾಗಿದೆ.

ಮಾಧ್ಯಮವೊಂದರಲ್ಲಿ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಹಾಗೂ ಜೀಪ್ ಕಂಪನಿಯ ರಾಂಗ್ಲರ್ ರುಬಿಕಾನ್​ ಕಾರು, ರೇಣುಕಾ ಸ್ವಾಮಿಯನ್ನು ಕೂಡಿ ಹಾಕಿದ್ದ ರಾಜರಾಜೇಶ್ವರಿ ನಗರದ ಶೆಡ್​ಗೆ ಹೋಗುತ್ತಿರುವುದು ಪತ್ತೆಯಾಗಿದೆ. ಈ ಎರಡೂ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಪೊಲೀಸರು. ಈ ಜೀಪ್‌ವನ್ನು ದರ್ಶನ್‌ ಬೆಂಗಳೂರಿನಲ್ಲಿ ಓಡಾಡಲು ಇದನ್ನೇ ಬಳಸಿಕೊಳ್ಳುತ್ತಿದ್ದರು.cಕೊಲೆಯಾದ ರಾತ್ರಿ ಇದೇ ಕಾರಿನಲ್ಲಿ ರಾಜರಾಜೇಶ್ವರಿ ನಗರದ ಶೆಡ್​ಗೆ ಆಗಮಿಸಿದ್ದರು ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಸ್ಕಾರ್ಪಿಯೋ ಕಾರಿನಲ್ಲಿ ಆರೋಪಿಗಳು ರೇಣುಕಾ ಸ್ವಾಮಿಯ ಶವವನ್ನು ಕೊಂಡೊಯ್ದು ಸುಮನಹಳ್ಳಿ ಮೋರಿಗೆ ಎಸದಿದ್ದರು ಎನ್ನಲಾಗುತ್ತಿದೆ. ಇನ್ನು ಜೀಪ್‌ ದರ್ಶನ್ ಆಪ್ತ ವಿನಯ್ ಹೆಸರಿನಲ್ಲಿ ನೊಂದಣಿ ಆಗಿದೆ. ಸ್ಕಾರ್ಪಿಯೋ ಕಾರು ದರ್ಶನ್​ರ ಮತ್ತೊಬ್ಬ ಆಪ್ತ ಪ್ರದೋಶ್ ಹೆಸರಿನಲ್ಲಿ ನೊಂದಣಿ ಆಗಿದೆ. ವಿನಯ್ ಹಾಗೂ ಪ್ರದೋಶ್ ಇಬ್ಬರೂ ಸಹ ಈಗ ಪೊಲೀಸರ ವಶದಲ್ಲಿಯೇ ಇದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಬಂಧನವಾಗಿರುವ ನಟ ದರ್ಶನ್‌ , ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳು

1.ನಟ ದರ್ಶನ್‌
2.ಪವಿತ್ರಾ ಗೌಡ
3.ಕೆ. ಪವನ್-ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಗೂ ಆಪ್ತ
4.ಪ್ರದೋಶ್- ಹೋಟೆಲ್ ಉದ್ಯಮಿ
5.ನಂದೀಶ್- ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ, ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು
6.ಕೇಶವಮೂರ್ತಿ, ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
7.ರಾಘವೇಂದ್ರ- ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
8.ಎಂ.ಲಕ್ಷ್ಮಣ್
9. ದೀಪಕ್ ಕುಮಾರ್
10.ಕಾರ್ತಿಕ್
11.ಆರ್.ನಾಗರಾಜ್, ದರ್ಶನ್ ಆಪ್ತ
12.ವಿ.ವಿನಯ್‌
13. ನಿಖಿಲ್‌ ನಾಯಕ್‌…ಪರದೆ ಮೇಲೆ ನೋಡಲು ಮಾತ್ರ ನಿಜವಾದ ನಾಯಕ ನಿಜವಾದ ಜೀವನದಲ್ಲಿ ದೊಡ್ಡ ಖಳನಾಯಕ ದರ್ಶನ್ ನಂತಹ ನಿಜಜೀವನದ ಖಳನಾಯಕ ಅಂದರೆ ಈ ಇಂದೆ ಅವನ ಹೆಂಡತಿ ವಿಜಯಲಕ್ಷ್ಮಿ ಯವರೇ ಇವನ ಮೇಲೆ FIR ದಾಖಲಿಸಿರುವ ಘಟನೆಗಳು ಇವೆ ಆದರೆ ಇದೆ ಕಷ್ಟ ತೂಗುದೀಪ್ ದರ್ಶನ್ ಕುಟುಂಬಕ್ಕೆ ಬಂದರೆ ಇವನು ಇಗೆ ಇರುತ್ತಿದನ ಎನ್ನುವ ಉದ್ದೇಶದಿಂದ ಇಂದು ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು ಇಂತಹ ಕಿಲ್ಲರ್ ಗಳನ್ನು ನಾವು ಬೆಳೆಸಿದ್ದೆ ತಪ್ಪಾ? ಇನ್ನಾದರೂ ಇಂತಹ ಸೇಲಾಬ್ರೇಟ್ಗಳನ್ನು ಬೆಳೆಸವುದಕ್ಕಿಂತ ಮುಂಚೆ ವಿಚಾರ ಮಾಡಿ…

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend