ರಮೇಶ ಜಾರಕಿಹೊಳಿ ತಂಡಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಟಾಂಗ್ ನೀಡಿದರು…!!!

Listen to this article

ಬೆಳಗಾವಿ: ಪಕ್ಷದಲ್ಲಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಸಭೆಗಳನ್ನು ಮಾಡುತ್ತಾರೆ. ಇನ್ನೊಂದು ಕಡೆ ಕೆಲವು ಬಾಲಂಗೋಚಿಗಳು ಕೆಲಸ ಮಾಡುತ್ತವೆ. ಇದನ್ನು ಹೊರತುಪಡಿಸಿ ಹಗಲಿರುಳು ದುಡಿದು ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯಕರ್ತರಿದ್ದಾರೆ ಎಂದು ಪರೋಕ್ಷವಾಗಿ ರಮೇಶ ಜಾರಕಿಹೊಳಿ ತಂಡಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಟಾಂಗ್ ನೀಡಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಲವರು ಪಕ್ಷವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳುವ ಕೆಲಸ ಮಾಡುತ್ತಾರೆ. ಬೆಳಗಾವಿಯಲ್ಲಿ ಪಕ್ಷದ ಕೆಲವರು ನಡೆಸಿರುವ ಸಭೆಯ ಬಗ್ಗೆ ಕೇಂದ್ರದ ನಾಯಕರ ಗಮನಕ್ಕೆ ತರಲಾಗುವುದು ಎಂದರು.
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿ ರೀತಿಯಲ್ಲಿ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರು ನೀಡಿರುವ ಹೇಳಿಕೆ ನಾಚಿಕೆಗೇಡಿನ ಸಂಗತಿ. ಕೂಡಲೇ ಕಾಂಗ್ರೆಸ್ ನಾಯಕರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ದಲಿತರ ಹಣವನ್ನೇ ಲೂಟಿ ಮಾಡಿದ್ದಾರೆ. ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಈರಣ್ಣ ಕಡಾಡಿ ಆಗ್ರಹಿಸಿದರು…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend