ವಿಷ್ಣುಸೇನಾ ಮಹಾಗಣಪತಿ ಸೇವಾಸಮಿತಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಮಾನವಿ. ಪೋತ್ನಾಳ ಗ್ರಾಮದಲ್ಲಿ ವಿಷ್ಣುಸೇನಾ ಮಹಾಗಣಪತಿ ಸೇವಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ಜರುಗಿತು ..ಗಣ್ಯರು ಹಾಗು ವೈದ್ಯರು ಮಾತನಾಡಿ ರಕ್ತದಾನ ಮಾಡುವುದರಿಂದ ದೇಹಕ್ಕೆ ಒಳ್ಳೆಯದು ದೇಹದಲ್ಲಿ ಇರುವ ಕೊಲೆಸ್ಟ್ರಾಲ್ ಕಡಿಮೆಯಾಗಿ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಸಹಾಯವಾಗುತ್ತದೆ. ಅಪಘಾತಕ್ಕೆ ತುತ್ತಾದವರು,ಗರ್ಭಿಣಿಯರು, ಮಕ್ಕಳು ಹಾಗೂ ಥಲೇಸಿನಿಯಾ ರೋಗಿಗಳಿಗೆ ರಕ್ತ ನೀಡುವ ಅವಶ್ಯಕತೆ ಇದ್ದು ಆರೋಗ್ಯವಂತರು ರಕ್ತದಾನ ಮಾಡಲು ಹಿಂಜರಿಯಬಾರದು ಎಂದು ಹೇಳಿದರು. ಈ ಸಂಧರ್ಭದಲ್ಲಿ ಪರಮಪೂಜ್ಯರಾದ ಶ್ರೀ. ಮ.ನೀ.ಪ್ರ. ಶಾಂತಮಲ್ಲ ಮಹಾಸ್ವಾಮಿಗಳು ಸುಕ್ಷೇತ್ರ ಅಡವಿ ಅಮರೇಶ್ವರ ,ಖ್ಯಾತ ವೈದ್ಯರಾದ ಶ್ರೀ ಡಾ.ಬಿ.ಬಸವರಾಜಪ್ಪ ,ಡಾ.ಗುರು ಶರ್ಮಾ, ಡಾ.ಪ್ರಶಾಂತ ಇಲ್ಲೂರು ,ಡಾ.ನಾರಾಯಣ್ ರಾವ್ ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಬಸವರಾಜ ,ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಹುಚ್ಚಪ್ಪ ಹಾಗೂ ಯುವಮುಖಂಡರಾದ ಶ್ರೀ ವಿರುಪಾಕ್ಷಿಗೌಡ ,ಅಮರೇಶ ನಾಯಕ್ ರಂಗದಾಳ ,ಆದೇಶಗೌಡ, ಹಾಗು ವಿಷ್ಣುಸೇನಾ ಮಹಾಗಣಪತಿ ಸೇವಾ ಸಮಿತಿಯ ಸರ್ವ ಸದಸ್ಯರು ಮತ್ತು ಊರಿನ ಗುರು ಹಿರಿಯರು ಉಪಸ್ಥಿತರಿದ್ದರು.
ವರದಿ,ಲಿಂಗಾರಜ್ ತಡಕಲ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030