ರಾಹುಲ್ ಗಾಂಧಿ ವಿರುದ್ಧ ಸುಳ್ಳಿನ ಸರಮಾಲೆ ಸೃಷ್ಟಿ…!!!

Listen to this article

ರಾಹುಲ್ ಗಾಂಧಿ ವಿರುದ್ಧ ಸುಳ್ಳಿನ ಸರಮಾಲೆ ಸೃಷ್ಟಿ.

ರಾಯಚೂರು

ರಾಹುಲ್ ಗಾಂಧಿಯವರು ಒಬ್ಬ ಪ್ರತಿಪಕ್ಷದ ನಾಯಕ ಬಿಜೆಪಿಯವರು ರಾಹುಲ್ ಗಾಂಧಿಯವರನ್ನು ಮುಗಿಸಲು ಸಂಚು ಮಾಡುತ್ತಿದ್ದು ಇದು ಅಸಾಧ್ಯ ಎಂದು ರಾಯಚೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಡಾ. ನಾಗವೇಣಿ ಎಸ್ ಪಾಟೀಲ್ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ..

ಈ ಕುರಿತು ಪತ್ರಿಕ ಹೇಳಿಕೆ ನೀಡಿರುವ ಅವರು ರಾಹುಲ್ ಗಾಂಧಿಯವರಿಗೆ ಕೊಲೆ ಬೆದರಿಕೆ ತೇಜೋವದೆಗೆ ಸುಳ್ಳಿನ ಸರಮಾಲೆ ಸೃಷ್ಟಿ ಮಾಡುತ್ತಿದೆ. ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿಯವರು ಇದಕ್ಕೆಲ್ಲ ಹೆದರುವವರಲ್ಲ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ದೇಶಕ್ಕಾಗಿ ಹುತಾತ್ಮ ರಾಗಿದ್ದಾರೆ. ಇಂಥ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದ ರಾಹುಲ್ ಗಾಂಧಿಯವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗಾಂಧಿಗೆ ಬಿಜೆಪಿ ಬೆದರಿಕೆ ಹಾಕಿದೆ ಎಂದು ವಾಗ್ದಾಳಿ ನಡೆಸಿದರು..

ರಾಹುಲ್ ಗಾಂಧಿಯವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ತಕ್ಷಣ ಬಂದಿಸಬೇಕೆಂದು ತಿಳಿಸಿದ್ದಾರೆ…

ವರದಿ, ಲಿಂಗರಾಜ್ ತಡಕಲ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend