ಇಂದು ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂನಲ್ಲಿ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಮಲಾಪುರ ಪುರಸಭೆಯ ಸರ್ಕಾರಿ ಆಸ್ಪತ್ರೆಯ ಬಗ್ಗೆ ಅಲ್ಲಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು ಉದಾಹರಣೆಗೆ, ಡಾ. ಸರಿಯಾದ ಸಮಯಕ್ಕೆ ಬರದೆ ಇರುವುದು ಮೂಲಭೂತ ಸೌಲಭ್ಯಗಳು ಹೊರರೋಗಿಗಳಿಗೆ ದೊರಕುತ್ತಿರುವುದು ಸಭೆಯ ಗಮನಕ್ಕೆ ತರಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸಲಹೆಗಾರರಾದ ಶ್ರೀ ಬಸವರಾಜ ರಾಯರೆಡ್ಡಿ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್ , ದಾವಣಗೆರೆ ಸಂಸದರಾದ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ವಿಜಯನಗರ ಶಾಸಕರಾದ ಹೆಚ್ ಆರ್ ಗವಿಯಪ್ಪ , ವಿಜಯನಗರ ಜಿಲ್ಲೆಯ ಶಾಸಕರುಗಳಾದ ಶ್ರೀಮತಿ ಎಂ.ಪಿ ಲತಾ ಮಲ್ಲಿಕಾರ್ಜುನ್, ಶ್ರೀ ನೇಮಿರಾಜ್ ನಾಯಕ್, ಶ್ರೀ ಡಾ. ಶ್ರೀನಿವಾಸ್ ಹಾಗು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೆಚ್ ಕಾಳಪ್ಪ ವಿಜಯನಗರ ಜಿಲ್ಲಾ
ಕೆ.ಡಿ.ಪಿ ಸದಸ್ಯರು ವಿಜಯನಗರ ಜಿಲ್ಲಾ ಪಂಚಾಯತಿ ಹಾಗೂ ಮಾಜಿ ಎ.ಪಿ.ಎಂ.ಸಿ ಸದಸ್ಯರು ಹೊಸಪೇಟೆ…
ವರದಿ. ಬಿ, ಗಣೇಶ್ ಹೊಸಪೇಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030