ಹಾಲೇಶ್ ಹಕ್ಕಂಡಿಯವರಿಗೆ ” ಉತ್ತಮ ಶಿಕ್ಷಕ ಪ್ರಶಸ್ತಿ ”
21/10/2024 ರ ಸೋಮವಾರದಂದು ಬೆಂಗಳೂರಿನಲ್ಲಿ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಇವರು ರಾಜ್ಯ ಮಟ್ಟದ ಖಾಸಗಿ ಶಾಲಾ ಶಿಕ್ಷಕರಿಗೆ ನೀಡುವ ” ಉತ್ತಮ ಹಾಗೂ ಆದರ್ಶ ಶಿಕ್ಷಕ ” ಪ್ರಶಸ್ತಿ ಸಮಾರಂಭದಲ್ಲಿ ಸೋಗಿ ದಿವ್ಯ ಜ್ಯೋತಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಹಾಲೇಶ್ ಹಕ್ಕಂಡಿ ಇವರ ಶಿಕ್ಷಣ ಸೇವೆ ಗುರುತಿಸಿ “ಉತ್ತಮ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರಿಗೆ ಶ್ರೀ ಜ್ಞಾನ ಜ್ಯೋತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಹಾಗೂ ಸರ್ವ ಸದಸ್ಯರು ಮತ್ತು ಹೂವಿನ ಹಡಗಲಿ ತಾಲೂಕಿನ ರೂಪ್ಸ ಸಂಘಟನೆಯ ಅಧ್ಯಕ್ಷರು ಸರ್ವ ಸದಸ್ಯರು, ಶಾಲಾ ಪೋಷಕರು, ವಿದ್ಯಾರ್ಥಿಗಳು, ಶುಭಕೋರಿ ಅಭಿನಂದಿಸಿದರು…
ವರದಿ. ಪ್ರಕಾಶ್ ಕಲ್ಮನಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030