ಶಾಲಾ ಕಾಲೇಜುಗಳ ಸರಿಯಾದ ಸಮಯಕ್ಕೆ ಬಸ್ ಕಲ್ಪಿಸಿಕೊಡಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹೋರಾಟ…!!!

Listen to this article

ಶಾಲಾ ಕಾಲೇಜುಗಳ ಸರಿಯಾದ ಸಮಯಕ್ಕೆ ಬಸ್ ಕಲ್ಪಿಸಿಕೊಡಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹೋರಾಟ… ರಾಯಚೂರು ತಾಲೂಕಿನ ಕಟಕನೂರು ಗ್ರಾಮದಿಂದ ಗಿಲ್ಲೆಸೂಗೂರು ಹೋಬಳಿಗೆ ಶಾಲಾ ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ರಾಯಚೂರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿಗೆ SFI ನಿಂದ ವಿದ್ಯಾರ್ಥಿಗಳೊಂದಿಗೆ ಏಕಾಏಕಿ ಮುತ್ತಿಗೆ ಹಾಕಲಾಯಿತು.DTO ಅವರು ಸಮಯಕ್ಕೆ ಸರಿಯಾಗಿ ಬಸ್ ನೀಡಲಾಗುವುದು ಎಂದು ಭರವಸೆ ನೀಡಿದರು. ಒಂದು ವಾರದಲ್ಲಿ ಸಮಸ್ಯೆ ಪರಿಹಾರ ಆಗಿಲ್ಲ ಅಂದ್ರೆ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು.ಈ ಸಂದರ್ಭದಲ್ಲಿ SFI ಸಂಘಟನೆಯ ರಾಯಚೂರು ಜಿಲ್ಲಾಧ್ಯಕ್ಷರಾದ ರಮೇಶ ವೀರಾಪೂರು, ಜಿಲ್ಲಾ ಸಹಕಾರ್ಯದರ್ಶಿ ಚಿದಾನಂದ ಕರಿಗೂಳಿ.ಚಾಗಭಾವಿ. ಹನುಮಂತ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹೀರಾಪೂರ, ಭೀಮಯ್ಯ ಗ್ರಾಮ ಪಂಚಾಯತಿ ಸದಸ್ಯರು ಕಟಕನೂರು, ಸುಂದರ ವಿದ್ಯಾರ್ಥಿ ಮುಖಂಡರು ಹಾಗೂ ಊರಿನ ಮುಖಂಡರಾದ, ಶೇಖರಪ್ಪ, ಜಯಪ್ಪ, ಸಂಜೀವ ಮತ್ತು ವಿದ್ಯಾರ್ಥಿಗಳು ಇದ್ದರು..

ವರದಿ ಮ್ಯಾಗೇರಿ ಸಂತೋಷ ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend