ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದ ವ್ಯಾಪ್ತಿಯಲ್ಲಿನ ಹಾನಗಲ್ ಪೆಟ್ರೋಲ್ ಬಂಕ್ ಮುಂಭಾಗ ಇಂದು (ಜೂ.13) ನಡೆದ ಪ್ರತಿಭಟನೆಯಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಭಾಗವಹಿಸಿ ಕೇಂದ್ರದ ಬೆಲೆ ಏರಿಕೆಯ ವಿರುದ್ಧ ಮಾತನಾಡಿ, ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷರಾದ ಎನ್.ಕೆ.ದಾದಪೀರ್, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಜುಬೈರ್, ಹಾನಗಲ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾಂಗ್ರೆಸ್ ಗ್ರಾಮ ಪಂಚಾಯ್ತಿ ಸದಸ್ಯರು ಗಳು ಮತ್ತು ಮುಖಂಡರುಗಳು ನಾಗರಾಜ ಕಟ್ಟೆ, ಮೊಹಮ್ಮದ್ ಗೌಸ್, ಮೊಗಲಳ್ಳಿ ಜಯಣ್ಣ, ಕಾಂಗ್ರೆಸ್ ಕಾನೂನು ವಿಭಾಗ ಸಮಿವುಲ್ಲಾ, ಯುವ ಕಾಂಗ್ರೆಸ್ ಕಾರ್ಯಧ್ಯಕ್ಷರಾದ ಜಗದೀಶ್, ಮೊಳಕಾಲ್ಮೂರು ಪಟ್ಟಣ ಪಂಚಾಯತಿ ಸದಸ್ಯರಾದ ಅಬ್ದುಲ್ಲಾ, ಸಾಮಾಜಿಕ ಜಾಲತಾಣದ ಜಿಲ್ಲಾ ಉಪಾಧ್ಯಕ್ಷ ರಾದ ಚೌಡಪ್ಪ, ಪ್ರದೀಪ್, ಕಿರಣ್ ವಾಂಜ್ರೆ ವಸಂತಾಚಾರ್, ವಸಿವುಲ್ಲ, ಜಿಯಾವುಲ್ಲ, ಎಸ್.ಟಿ ಘಟಕದ ಅಧ್ಯಕ್ಷರಾದ ಟಿ ಎಸ್.ಪಾಲಣ್ಣ, ಹಾಗೂ ಭಕ್ತ ಪ್ರಹಲ್ಲಾದ ರಾಯಪುರ ಗ್ರಾಮ ಪಂಚಾಯ್ತಿ ಅಧ್ಯರಾದ ಮಲ್ಲಿಕಾರ್ಜುನ, ಆನಂದ್, ಮುಂತಾದ ಮುಖಂಡರು ಉಪಸ್ಥಿತರಿದ್ದರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030