ವಸತಿರಹಿತರಿಗೆ ಪುನರ್ವಸತಿ ಕಲ್ಪಿಸಲು ನಗರದ ಸುತ್ತ 10 ಎಕರೆ ಸರ್ಕಾರಿ ಜಮೀನನ್ನು ಕಾಯ್ದಿರಿಸಿ: ಡಾ. ಕುಮಾರ
ಮಂಡ್ಯ ನಗರದಲ್ಲಿ ಅಂದಾಜು 24 ಕೊಳಚೆ ಪ್ರದೇಶಗಳಿದ್ದು, ಹೆಚ್ಚುವರಿಯಾಗಿ ಘೋಷಣೆಯಾಗಿಲ್ಲದ ಕೊಳಚೆ ಪ್ರದೇಶದ ಗುಣಲಕ್ಷಣಗಳನ್ನು ಹೊಂದಿರುವ ಹಲವು ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ನಿವೇಶನ ಮತ್ತು ವಸತಿರಹಿತರಿಗೆ ಪುನರ್ವಸತಿ ಕಲ್ಪಿಸಲು ಮಂಡ್ಯ ನಗರದ ಸುತ್ತ 10 ಎಕರೆ ಸರ್ಕಾರಿ ಜಮೀನನ್ನು ಕಾಯ್ದಿರಿಸಲು ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಅವರಿಗೆ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು, ನಗರಸಭೆ ಪೌರಾಯುಕ್ತ ಆರ್. ಮಂಜುನಾಥ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯ ಪಾಲಕ ಅಭಿಯಂತರರು ಜವಹಾರ್ ಜೋಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಚ್. ಎಸ್ ನಿರ್ಮಲಾ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…
ವರದಿ. ಸುರೇಶ್ ಮಂಡ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030