ಸರ್ಕಾರಿ ಶಾಲೆಗಳು ಮುಚ್ಚದಂತೆ ಎಚ್ಚರವಹಿಸಿ ; ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಬೇಕು – ಶಾಸಕ ಡಾ. ಶ್ರೀನಿವಾಸ್. ಎನ್‌. ಟಿ…!!!

Listen to this article

ಸರ್ಕಾರಿ ಶಾಲೆಗಳು ಮುಚ್ಚದಂತೆ ಎಚ್ಚರವಹಿಸಿ ; ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಬೇಕು – ಶಾಸಕ ಡಾ. ಶ್ರೀನಿವಾಸ್. ಎನ್‌. ಟಿ.

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರ ಇಂದು ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಸಿದರು. ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ನೋಡಿಕೊಳ್ಳಲು ನನ್ನೊಂದಿಗೆ ಕೈ ಜೋಡಿಸಬೇಕು ಎಂದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ಕುರಿತು ಸುದೀರ್ಘವಾಗಿ ಚಿಂತನೆ ಮಾಡಿದರು. ಹಳ್ಳಿಗಳಲ್ಲಿ ತಾಂಡವಾಡುತ್ತಿರುವ ಅನಕ್ಷರತೆ, ಮೌಢ್ಯತೆ, ಬಡತನ, ಹಸಿವು ಮತ್ತು ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಅಕ್ಷರ ಕ್ರಾಂತಿಗೆ ಸರ್ಕಾರ ಮಟ್ಟದಲ್ಲಿ ಪಣತೊಡಬೇಕು ಎಂದೂ ಹೇಳಿದರು. ಈ ಸಂದರ್ಭದಲ್ಲಿ ಬಿ.ಇ‌.ಓ. ಅಧಿಕಾರಿಗಳಾದ ಪದ್ಮನಾಭ ಕರಣಂ ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend