ದರ್ಶನ್ ಎಂಬ ನಟ ಭಯಂಕರ…!!!

Listen to this article

ಕೊಲೆ ಬಳಿಕ ‘ನಿನ್ನಿಂದಲೇ ಇದೆಲ್ಲ ಆಯ್ತು’: ಪವಿತ್ರಾ ಗೌಡ ಮೇಲೆ ದರ್ಶನ್ ಹಲ್ಲೆ, ಡಿಸ್ಚಾರ್ಜ್..!

ಬೆಂಗಳೂರು, ಜೂನ್ 11: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್ ಹಲ್ಲೆ ತಮ್ಮ ಮೇಲೆ ಸಹ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಪವಿತ್ರಾಗೌಡ ಅವರು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೌದು, ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೆಜ್ ಮಾಡಿದ್ದ ವ್ಯಕ್ತಿ ರೇಣುಕಾಸ್ವಾಮಿ ಅವರನ್ನು ಹತ್ಯೆ ಮಾಡಲಾಗಿದೆ. ಬಳಿಕ ಇದೆಲ್ಲವು ಆಗಿದ್ದ ನಿನ್ನಿಂದಲೇ ಎಂದು ನಟ ದರ್ಶನ್ ಪವಿತ್ರಾ ಗೌಡ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ.

ದರ್ಶನ್ ನಿಂದ ಹಲ್ಲೆಗೆ ಒಳಗಾದ ಪವಿತ್ರಾ ಗೌಡ ಅವರು ನೆನ್ನೆ ಸೋಮವಾರ ವಷ್ಟೇ ಬೆಂಗಳೂರಿನ ರಾಜ ರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ಬಳಿಕ ಅವರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಇದೆಲ್ಲ ಅಂಶಗಳು ಇದೀಗ ನಟ ದರ್ಶನ್ ಗೆ ಸಂಬಂಧಿಸಿದ ಕೊಲೆ ಪ್ರಕರಣ ಮತ್ತಷ್ಟು ಉರುಳು ತರಲಿವೆ.

: ನಾನು ಬೆದರಿಸುವಂತೆ ಹೇಳಿದ್ದೆ:
ನಟ ದರ್ಶನ್ ಮೊದಲ ಪ್ರತಿಕ್ರಿಯೆ :
ನಾನು ಬೆದರಿಸುವಂತೆ ಹೇಳಿದ್ದೆ:
ನಟ ದರ್ಶನ್ ಮೊದಲ ಪ್ರತಿಕ್ರಿಯೆ
ನಟ ದರ್ಶನ್ ಒಂದು ಕಡೆ ನಾನು ಕೊಲೆ ಮಾಡಲು ಹೇಳಿಲ್ಲ ಎನ್ನುತ್ತಿದ್ದಾರೆ. ಕೊಲೆ ನಡೆದಿರುವುದು ನಟನಿಗೆ ಗೊತ್ತಾದ ಬಳಿಕವೇ ‘ನಿನ್ನಿಂದ ಇದೆಲ್ಲ ಆಗಿದೆ’ ಎಂದು ಮನಬಂದಂತೆ ಬೈದಿದ್ದಾರೆ. ನಂತರ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದೆಲ್ಲವನ್ನು ಅವರು ಪೊಲೀಸರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ.

ಸದ್ಯ ನಟ ದರ್ಶನ್ ಅನ್ನುಪೂರ್ಣೆಶ್ವರಿ ನಗರದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅದರ ಬೆನ್ನಲ್ಲೆ ಅವರ ಪ್ರೇಯಸಿ ಪವಿತ್ರಾ ಗೌಡ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಸದ್ಯ ಕೂಲಂಕುಷವಾಗಿ ದರ್ಶನ್ ಹಾಗೂ ಪವಿತ್ರಾ ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ನಟ ದರ್ಶನ್ ಮೇಲೆ ಕೊಲೆ ಆರೋಪದ ಜೊತೆಗೆ ಹನಿಟ್ರ್ಯಾಪ್, ಕಿಡ್ನಾಪ್ ಆರೋಪಗಳು ಕೇಳಿ ಬಂದಿವೆ. ದರ್ಶನ್ ಹಾಗೂ ಪವಿತ್ರಾ ಗೌಡರ ವಿಚಾರಣೆ ಪೂರ್ಣಗೊಂಡಿದೆ. ಇವರಿಬ್ಬರು ಸೇರಿದಂತೆ ಎಲ್ಲ 13 ಬಂಧಿತ ಆರೋಪಿಗಳನ್ನು ಸಂಜೆ ನ್ಯಾಯಾಲಯದ ಮುಂದೆ ಪೊಲೀಸರ ಹಾಜರುಪಡಿಸಲಿದ್ದಾರೆ…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend