ಶರಣ ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆ: ಹೆಚ್ಚುವರಿ ಎಸ್ಪಿ ಡಾ.ಶಿವಕುಮಾರ್…!!!

Listen to this article

ಜಿಲ್ಲಾಡಳಿತದಿಂದ ಡಾ.ಫ.ಗು.ಹಳಕಟ್ಟಿ ಅವರ ಜಯಂತಿ ಆಚರಣೆ, ವಿದ್ಯಾರ್ಥಿಗಳು ಭಾಗಿ, ನಗರದಲ್ಲಿ ಮೆರವಣಿಗೆ
ಶರಣ ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆ: ಹೆಚ್ಚುವರಿ ಎಸ್ಪಿ ಡಾ.ಶಿವಕುಮಾರ್
ರಾಯಚೂರು,:- ಡಾ.ಫ.ಗು.ಹಳಕಟ್ಟಿ ಅವರು ವಚನಗಳ ಹಸ್ತ ಪ್ರತಿಗಳನ್ನು ಸಂಗ್ರಹಿಸಿ, ಪ್ರಕಟಿಸಿ, ಶರಣ ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ.ಶಿವಕುಮಾರ್ ಅವರು ಹೇಳಿದರು.

ಅವರು ಜು.02ರ ಮಂಗಳವಾರ ದಂದು ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮoದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಸರಳ, ಸಜ್ಜನಿಕೆ, ಕ್ರಿಯಾಶೀಲತೆ, ವಿಶೇಷ ಆಸಕ್ತಿ, ಪರಿಶ್ರಮ ಮತ್ತು ಕನ್ನಡ ನಾಡು, ನುಡಿ, ಹಾಗೂ ಸಾಹಿತ್ಯದ ಬಗ್ಗೆ ಅವರಿಗೆ ವಿಶೇಷ ಕಾಳಜಿ, ಪ್ರೀತಿ ಇದ್ದದ್ದನ್ನು ಗಮನಿಸಬಹುದು. ಅವರಲ್ಲಿಯ ಶಿಸ್ತು, ಶ್ರದ್ದೆ, ಮಾಡುವ ಕೆಲಸದಲ್ಲಿನ ನಿಷ್ಠೆಯಿಂದಾಗಿ ವಚನ ಸಾಹಿತ್ಯ ಸಂಗ್ರಹಕ್ಕೆ ಅವರು ಮಾಡಿದ ಸಾಹಸ ಪೂರ್ಣಕಾರ್ಯ ಶ್ಲಾಘನೀಯ ಹಾಗೂ ಸ್ಮರಣೀಯವಾಗಿದೆ ಎಂದರು.

ಹಸ್ತಪ್ರತಿಗಳು ಪ್ರಕಟಣೆಗೆಂದೇ ಶಿವಾನುಭವ ಪತ್ರಿಕೆಯನ್ನು 1926ರಲ್ಲಿ ಪ್ರಾರಂಭಿಸಿದರು. ಈ ಮಾಸ ಪತ್ರಿಕೆ 35ವರ್ಷಗಳ ಕಾಲ ನಿರಂತರ ನಡೆಸಿದ ಕನ್ನಡ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 1927ರಲ್ಲಿ ‘ನವಕರ್ನಾಟಕ’ ವಾರ ಪತ್ರಿಕೆ ಆರಂಭಿಸಿದರು. ಈ ಎರಡು ಪತ್ರಿಕೆ ಸಂಪಾದಕ, ಮುದ್ರಿಕೆ ಫ.ಗು.ಹಳಕಟ್ಟಿಯವರೇ ಆಗಿದ್ದಾರೆ ಎಂದು ಹೇಳಿದರು.

ಈ ವೇಳೆ ರಾಯಚೂರು ಸಹಾಯಕ ಆಯುಕ್ತರಾದ ಮೈಬೂಬಿ ಅವರು ಮಾತನಾಡಿ, ಫ.ಗು.ಹಳಕಟ್ಟಿ ಅವರು ಕರ್ನಾಟಕದ ಮ್ಯಾಕ್ಸ್ಮುಲ್ಲರ್ ಎಂಬ ಕೀರ್ತಿಗೆ ಭಾಜನರಾದರು. ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂಪಾದಿಸಿ ಪ್ರಕಟಿಸಿ ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

ಇoದಿನ ಮಕ್ಕಳಲ್ಲಿ ಇಂಗ್ಲೀಷ್ ಶಿಕ್ಷಣದ ವ್ಯಾಮೋಹ ದಿಂದ ಕನ್ನಡ ಸಾಹಿತ್ಯ ಓದಲು ಹಿಂಜರಿಯುತ್ತಿದ್ದು, ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಹೆಚ್ಚಾಗಿ ಓದಿ ಕನ್ನಡ ಸಾಹಿತ್ಯವನ್ನು ಬೆಳೆಸಿ, ಫ.ಗು.ಹಳಕಟ್ಟಿ ಅವರ ಜೀವನದ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕೆಂದರು.

ಉಪನ್ಯಾಸಕರಾಗಿ ಹಿರಿಯ ಸಾಹಿತಿ ವೀರಹನುಮಾನ್ ಅವರು ಮಾತನಾಡಿ, ವಚನ ಸಾಹಿತ್ಯ ಮತ್ತು ಪತ್ರಿಕೋದ್ಯಮದ ಜೊತೆಗೆ ಸಂಘಟನೆ, ಬ್ಯಾಂಕಿಗೆ , ಕೃಷಿ, ನೇಕಾರಿಕೆ, ಸಹಕಾರಿ ಹೀಗೆ ಎಲ್ಲದರಲ್ಲಿಯೂ ತಮ್ಮನ್ನು ತೊಡಗಿಸಿಕೊಂಡರು. 1910 ದಿಲ್ಲಿ ಬಿಜಾಪುರ ಜಿಲ್ಲಾ ಲಿಂಗಾಯತ ವಿದ್ಯಾವರ್ಧಕ ಸಂಘ (ಬಿ.ಎಲ್.ಡಿ.ಇ.). 1912ರಲ್ಲಿ ಶ್ರೀಸಿದ್ದೇಶ್ವರ ಅರ್ಬನ್ ಕೋ..ಆಪರೇಟಿವ್ ಬ್ಯಾಂಕು, ಗ್ರಾಮೀಣ ಅಭಿವೃದ್ಧಿ ಸಂಘ, ಒಕ್ಕಲುತನ ಸಹಕಾರಿ ಸಂಘ, ನೇಕಾರರ ಸಂಘ, ಹತ್ತಿ ಮಾರಾಟಗಾರರು ಸಂಘ, ಸಹಕಾರ ಸಂಘಗಳನ್ನು ಸ್ಥಾಪಿಸಿ ಇವುಗಳ ಬೆಳವಣಿಗೆಗೆ ದುಡಿದರು. ಅಲ್ಲದೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸ್ಥಾಪನೆಯಲ್ಲಿಯೂ ಇವರು ವಹಿಸಿದ ಪಾತ್ರ ಮಹತ್ವದ್ದಾಗಿದೆ ಎಂದರು.

ಶರಣ ಸಾಹಿತ್ಯದ ಶೋಧಕರು; ಶರಣರ ಜೀವನ ಮೌಲ್ಯಗಳನ್ನು ಕಾಲಾತೀತವಾದ ಕಾಲ ಗರ್ಭದಲ್ಲಿ ಹುದುಗಿ ಹೋಗಿದ್ದ ವಚನ ಸಾಹಿತ್ಯವೆಂಬ ಅನರ್ಘ್ಯ ರತ್ನವನ್ನು ಶೋಧಿಸಿ, ಅನ್ವೇಷಿಸಿ ಸಂಗ್ರಹಿಸಿ, ಸಂಪಾದಿಸಿ ಪ್ರಕಟಿಸಿ ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಒಂದು ವೇಳೆ ಶರಣ ಸಾಹಿತ್ಯದ ಕಡೆಗೆ ಲಕ್ಷ್ಯ ಹರಿಸದೇ ಇದ್ದರೆ ಇಂದು ನಮಗೆ ಶಿವಶರಣರ ವಚನಗಳು ದೊರಕುತ್ತಿರಲಿಲ್ಲ. ಕತ್ತಲ ಕಾಲ ಗರ್ಭದಲ್ಲಿದ್ದ ವಚನಗಳನ್ನು ಒಬ್ಬ ಸಾಮಾನ್ಯ ವಕೀಲರಾಗಿದ್ದುಕೊಂಡು ಶರಣರ ತತ್ವಾದರ್ಶಗಳು ಅವರೊಳಗಿದ್ದ ವೈಚಾರಿಕ ಮಾನವ ಪ್ರಜ್ಞೆಯನ್ನು ಎತ್ತಿ ತೋರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ ಎಂದರು.

ಇದಕ್ಕೂ ಮೊದಲು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮoದಿರದವರಿಗೆ ಮೆರೆವಣಿಗೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ನಾಯಕ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರೀವಿಕ್ಷರಾದ ಪರುಶುರಾಮ ಸೇರಿದಂತೆ ಹಿರಿಯ ಸಾಹಿತಿಗಳು, ವಿವಿಧ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಕಾರ್ಯಕ್ರಮದಲ್ಲಿ ಇದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend