ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ…!!!

Listen to this article

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್
ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ:ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿoದ ಜೀವನ ಮಾಡುವ ಸಾಮಾರ್ಥ್ಯ ಬೆಳೆಯಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ತರಾಸು ರಂಗಮoದಿರದಲ್ಲಿ ಶನಿವಾರ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಿತ್ರದುರ್ಗ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ “ಕೃಷಿ ಶಿಕ್ಷಣ ಸುಗ್ಗಿ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೃಷಿ ಶಿಕ್ಷಣ ಮಾಹಿತಿ ಕೊಡುವ ಉದ್ದೇಶದಿಂದ ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಿಯುಸಿ ಆದ ನಂತರ ಕೃಷಿ ಪದವಿಗಳು ಹಾಗೂ ಅವುಗಳಲ್ಲಿರುವ ಅವಕಾಶಗಳು, ಆಯ್ಕೆಯ ಬಗ್ಗೆ ಅರಿವಿನ ಕೊರತೆ ಹೋಗಲಾಡಿಸಲು, ರಾಜ್ಯದಲ್ಲಿರುವ ಕೃಷಿ ಸಂಬAಧಿತ ಶೈಕ್ಷಣಿಕ ಸಂಸ್ಥೆಗಳು ಮತ್ತು ಅಲ್ಲಿರುವ ಪದವಿಗಳು ಹಾಗೂ ಪ್ರವೇಶ ಪ್ರಕ್ರಿಯೆಯ ಬಗ್ಗೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ದೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿರುವುದನ್ನು ನಾವು ಗಮನಿಸಿದ್ದೇವೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರಗಳು ಕೋಟ್ಯಾಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಸರ್ವರಿಗೂ ಶಿಕ್ಷಣ ದೊರೆಯಬೇಕು ಎಂದು ಉದ್ದೇಶದಿಂದ ಶಾಲಾ-ಕಾಲೇಜು, ವಿಶ್ವವಿದ್ಯಾಲಯ, ಶೈಕ್ಷಣಿ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳ ಬಳಿಗೆ ಕೊಂಡ್ಯೂಯುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳು ತಮ್ಮ ಬೌದ್ಧಿಕ ಸಾಮಾರ್ಥ್ಯ ಹಾಗೂ ಬುದ್ಧಿಮಟ್ಟ ಹೆಚ್ಚಳದ ಅಭಿವೃದ್ಧಿ ನಮ್ಮ ಮುಂದಿರುವ ದೊಡ್ಡ ಸವಾಲಾಗಿದ್ದು, ಬುದ್ಧಿ ಯಾರ ಸ್ವತ್ತೂ ಅಲ್ಲ. ವಿದ್ಯಾರ್ಥಿಗಳು ಬದ್ಧತೆ ಹಾಗೂ ಏಕಾಗ್ರತೆಯಿಂದ ಅಧ್ಯಯನಶೀಲರಾಗಿ ಉಜ್ವಲಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೆಳದಿಯ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್, ಪ್ರಪಂಚದಲ್ಲಿಯೇ ಅತೀ ಕಡಿಮೆ ಖರ್ಚಿನಲ್ಲಿ ಶಿಕ್ಷಣ ನೀಡುವ ಪದವಿ ಎಂದರೆ ಅದು ಕೃಷಿ ವಿಜ್ಞಾನ ಪದವಿಯಾಗಿದೆ. ಶೈಕ್ಷಣಿಕವಾಗಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ವಿದ್ಯಾಭ್ಯಾಸ ಪಡೆಯಬೇಕು ಎಂದು ಹೇಳಿದರು.


ಚಿತ್ರದುರ್ಗ ಜಿಲ್ಲೆ ಆರ್ಥಿಕವಾಗಿ ಹಿಂದುಳಿದಿರಬಹುದು. ಆದರೆ ಶೈಕ್ಷಣಿಕವಾಗಿ ಜಿಲ್ಲೆಯು ಅಭಿವೃದ್ಧಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಪದವಿಗಳನ್ನು ಪಡೆದಿದ್ದು, ದೇಶ-ವಿದೇಶಗಲ್ಲಿಯೂ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದರು.
ಚಳ್ಳಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತç ವಿಷಯದ ಉಪನ್ಯಾಸಕಿ ಶಾಂತಕುಮಾರಿ ಮಾತನಾಡಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿರುವ ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ ಜಿಲ್ಲೆಯ ಪದವಿಪೂರ್ವ ವಿಜ್ಞಾನ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದ್ದು, ಇದರಿಂದ ಪಿಯು ನಂತರದಲ್ಲಿ ಕೃಷಿ ಸಂಬAಧಿತ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಸಾಕಷ್ಟು ಮಾಹಿತಿ ನೀಡಿದ್ದು, ಬಹಳಷ್ಟು ಉಪಯೋಗವಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.
ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಭೌತಶಾಸ್ತç ವಿಷಯದ ಉಪನ್ಯಾಸಕ ದತ್ತಾತ್ರೇಯ ಮಾತನಾಡಿ, ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಪಯಣಕ್ಕೆ ಬೇಕಾಗಿರುವ ಮಾಹಿತಿಯ ಅರಿವುವನ್ನು ಸಂಕ್ಷಿಪ್ತವಾಗಿ ನೀಡಿರುವುದು ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ನಗರದ ತರಾಸು ಮಂದಿರದ ಆವರಣದಲ್ಲಿ ಕೃಷಿ ಯಂತ್ರೋಪಕರಣಗಳು ಹಾಗೂ ಕೃಷಿ ಬೆಳೆಗಳ ವಸ್ತುಪ್ರದರ್ಶನ ಮಳಿಗೆಗಳು, ಕೃಷಿ ಉತ್ಪನ್ನ ಮೌಲ್ಯವರ್ಧಿತ ಉತ್ಪನ್ನದ ಆಹಾರದ ತಿನಿಸುಗಳು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಳದಿಯ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಡಾ.ಪಿ.ಕೆ. ಬಸವರಾಜ್, ಡಾ.ಬಿ.ಕೆ. ಕುಮಾರಸ್ವಾಮಿ ಹಾಗೂ ಕೆಳದಿ ಶಿವಪ್ಪನಾಯಕ ಕೃಷಿ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಸಚಿವ ಡಾ.ಕೆ.ಸಿ.ಶಶಿಧರ್, ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ.ಕೆ.ಮಂಜಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಪುಟ್ಟಸ್ವಾಮಿ ಸೇರಿದಂತೆ ಜಿಲ್ಲೆಯ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಇದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend