ಜನಸಾಮಾನ್ಯರಿಗೆ ಉಡಾಫೆ ಉತ್ತರ ಸಹಿಸಲಾರೆ: ಡಾ. ಶ್ರೀನಿವಾಸ್ ಎನ್ ಟಿ…!!!

Listen to this article

ಜನಸಾಮಾನ್ಯರಿಗೆ ಉಡಾಫೆ ಉತ್ತರ ಸಹಿಸಲಾರೆ: ಡಾ. ಶ್ರೀನಿವಾಸ್ ಎನ್ ಟಿ
ದಿ: 29.07.2024 ರಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ಕೂಡ್ಲಿಗಿ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮನ್ವಯ ಸಭೆ ಉದ್ದೇಶಿಸಿ ಮಾತನಾಡಿ, ಪ್ರಥಮವಾಗಿ ಪಟ್ಟಣದಲ್ಲಿ ನೀರಿಗೆ ಆದ್ಯತೆ ನೀಡಬೇಕು. ಸ್ವಚ್ಛತೆ, ಬೀದಿ ದೀಪ, ಬೀದಿ ನಾಯಿಗಳು & ಹಂದಿಗಳ ಹಾವಳಿ ನಿಯಂತ್ರಿಸಬೇಕು. ಬೀದಿ ರಸ್ತೆ ಅಭಿವೃದ್ಧಿ, ಒಳ ಚರಂಡಿ ವ್ಯವಸ್ಥೆ ಸರಿಪಡಿಸಬೇಕು. ಅನುದಾನವಿದ್ದರೂ ಹಿಂದೆ ಬಿದ್ದಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮತ್ತು ಅಷ್ಟೇ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ಇನ್ನು ಮುಂದೆ ಯಾವುದೇ ಕುಂಟು ನೆಪ ಹೇಳಿದರೆ ಕೇಳುವುದಿಲ್ಲ, ಜನಸಾಮಾನ್ಯರ ಜೊತೆ ಶಿಸ್ತುಬದ್ಧವಾಗಿ ನಿಗದಿತ ಸಮಯಕ್ಕೆ ಕಚೇರಿಯಲ್ಲಿದ್ದು ನಿಯಮಾನಸಾರವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಇಲ್ಲದಿದ್ದರೆ ಯಾವುದೇ ಮುಲಾಜಿ ಇಲ್ಲದೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಖಡಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣ ಪಂಚಾಯಿತಿಯ ಎಲ್ಲಾ ಜನಪ್ರತಿನಿಧಿಗಳ ಸಹಕಾರದೊಂದಿಗೆ ಪಕ್ಷಬೇಧ ಮರೆತು ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ, ಬೀದಿ ವ್ಯಾಪಾರಿಗಳಿಗೆ ಸ್ಥಳ ನಿಗದಿಪಡಿಸುವುದು, ವ್ಯಾಪಾರಿ ಮಳಿಗೆಗಳ ನಿರ್ಮಾಣ, ಪಟ್ಟಣದ ಜನಸಾಮಾನ್ಯರ ಮೂಲಭೂತ ಬದುಕಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪಟ್ಟಣ ಪಂಚಾಯಿತಿಯ ಸರ್ವ ಸದಸ್ಯರು & ಪ್ರಮುಖ ಮುಖಂಡರು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend