ವಾಲ್ಮೀಕಿ ಸಮುದಾಯ ಅಭಿವೃದ್ಧಿಗೆ ವಾಲ್ಮೀಕಿ ಭವನಗಳು ವೇದಿಕೆಯಾಗಲಿ ಶಾಸಕ ಡಾ. ಶ್ರೀನಿವಾಸ್. ಎನ್. ಟಿ.‌..!!!

Listen to this article

ವಾಲ್ಮೀಕಿ ಸಮುದಾಯ ಅಭಿವೃದ್ಧಿಗೆ ವಾಲ್ಮೀಕಿ ಭವನಗಳು ವೇದಿಕೆಯಾಗಲಿ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ.‌

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಗುಡೇಕೋಟೆ ಹಾಗೂ ದೇವರಹಟ್ಟಿ ಗ್ರಾಮಗಳಲ್ಲಿ 2022-23 ನೇ ಸಾಲಿನ ಪರಿಶಿಷ್ಟ ಕಲ್ಯಾಣ ಇಲಾಖೆಯ ಯೋಜನೆ ಅಡಿಯಲ್ಲಿ “ವಾಲ್ಮೀಕಿ ಭವನ” ನಿರ್ಮಾದ ಭೂಮಿ ಪೂಜೆಯನ್ನು ದಿನಾಂಕ 30-07-24 ರಂದು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ನೆರವೇರಿಸಿದ ಬಳಿಕ ಮಾತನಾಡಿದರು. ವಾಲ್ಮೀಕಿ ಸಮುದಾಯದ ಬಹುದಿನಗಳ ಬೇಡಿಕೆ ಮತ್ತು ಅವರ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಈ ದಿನ ವಾಲ್ಮೀಕಿ ಭವನಗಳ ಭೂಮಿ ಪೂಜೆಗೆ ಅತ್ಯಂತ ಸಂತಸದಿಂದ ನಾವು ಎಲ್ಲರೂ ಸಾಕ್ಷಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ಈ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕರಾದ ಶ್ರೀ ವಾಲ್ಮೀಕಿ ಅವರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಆಧುನಿಕತೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯ ಶಿಕ್ಷಣ ಮೂಲಕ ಆರ್ಥಿಕ ಮತ್ತು ಸಾಮಾಜಿಕವಾಗಿ ಬದಲಾವಣೆ ಹೊಂದಲು ಈ ಭವನಗಳು ವೇದಿಕೆಗೆ ಸಾಕ್ಷಿಯಾಗಲಿ ಎಂದೂ ಶುಭ ಹಾರೈಸುತ್ತೇನೆ‌ ಎಂದೂ ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಗ್ರಾ. ಪಂ.‌ಅಧ್ಯಕ್ಷರು – ಸದಸ್ಯರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ.ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend