ದೇಶಕ್ಕಾಗಿ ತ್ಯಾಗ- ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್.‌ಟಿ….!!!

Listen to this article

ದೇಶಕ್ಕಾಗಿ ತ್ಯಾಗ- ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್.‌ಟಿ.

ಕೂಡ್ಲಿಗಿ ಪಟ್ಟಣದ ಶ್ರೀ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ 78 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ಅಧ್ಯಕ್ಷತೆ ವಹಿಸಿ ರಾಷ್ಟ್ರ ಧ್ವಜ ಭಾವುಟ ಹಾರಿಸಿ ರಾಷ್ಟ್ರ ಗೀತೆ ನೆರವೇರಿಸಿ ಪಥ ಸಂಚಲನದಲ್ಲಿ ಗಣ್ಯರೊಂದಿಗೆ ಪಾಲ್ಗೊಂಡರು. ಅದಕ್ಕಿಂತ ಮುಂಚಿತವಾಗಿಯೇ ಶಾಸಕರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಿತಾ ಭಸ್ಮಕ್ಕೆ ಪುಷ್ಪಾ ನಮನ ಸಲ್ಲಿಸಿದರು. ಶಾಸಕರು ಕೂಡ್ಲಿಗಿ ಕ್ಷೇತ್ರದ ಸಮಸ್ತ ಜನರನ್ನು ಉದ್ದೇಶಿಸಿ ಮಾತನಾಡುತ್ತಾ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮತ್ತು ಬಲಿದಾನ ಮೂಲಕ ಹೋರಾಟ ಮಾಡಿ ಮಡಿದ ಮಹನೀಯರನ್ನು ಸ್ಮರಿಸಿಕೊಂಡರು. ನಮ್ಮ ಕ್ಷೇತ್ರದ ಪ್ರತಿಯೊಂದು ವರ್ಗದ ಜನರನ್ನು ಯಾವುದೇ ಭೇದ ಭಾವ ಮಾಡದೇ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಾಗುವುದು ಎಂದೂ ಹೇಳಿದರು. ಹಾಗೆಯೇ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ನೆನಪಿನ ಕಾಣಿಕೆ ಹಾಗೂ ಲ್ಯಾಪ್‌ಟಾಪ್ ನೊಂದಿಗೆ ಸನ್ಮಾನಿಸಿದರು. ಈ ವೇಳೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಪಟ್ಟಣ ಪಂಚಾಯತಿ ಸರ್ವಸದಸ್ಯರು, ವಿವಿಧ ಸಮಾಜದ ಗಣ್ಯರು, ಸಂಘನೆಕಾರರು, ವಿದ್ಯಾರ್ಥಿಗಳು , ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend