ರಾಯಚೂರು ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ…
ರಾಯಚೂರು:
ಕೇಂದ್ರ ಸರ್ಕಾರದ ರೈಲ್ವೆ ಮತ್ತು ಜಲ ಶಕ್ತಿ ಸಚಿವಾಲಯದ ರಾಜ್ಯ ಸಚಿವರಾದ ವಿ. ಸೋಮಣ್ಣ ರಾಯಚೂರು ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದರು ಈ ಸಂದರ್ಭದಲ್ಲಿ ಸ್ಟೇಷನ್ ಕಾಮಗಾರಿಯನ್ನು ಪರಿಶೀಲಿಸಿ ಪ್ರಯಾಣಿಕರ ಅಗತ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಿ ಹಾಗೂ ಸುರಕ್ಷತೆಗೆ ಆದ್ಯತೆ ನೀಡಿ
ಪಾರ್ಕಿಂಗ್ ಹಾಗೂ ಚಿಕ್ಕ ಮಕ್ಕಳಿಗಾಗಿ ಆಟದ ವಲಯ ಹಾಗೂ ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಸ್ಥಳವಕಾಶಗಳನ್ನು ಒದಗಿಸಿಕೊಡಲಾಗುವುದು ಎಂದು ಹೇಳಿದರು.
ಹಾಗೂ ಸಾರ್ವಜನಿಕ ರಿಂದ ಯಾವುದೇ ದೂರುಗಳು ಬರದೇ ನೋಡಿಕೊಳ್ಳಬೇಕೆಂದು ಸ್ಥಳದಲ್ಲಿದ್ದ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ರಾಯಚೂರು ನಗರ ಶಾಸಕರಾದ ಸನ್ಮಾನ ಶ್ರೀ ಶಿವರಾಜ ಪಾಟೀಲ್ , ಮಾಜಿ ಶಾಸಕರಾದ ಶಿವನಗೌಡ ನಾಯಕ್, ಶ್ರೀ ಬಸವನಗೌಡ ಬ್ಯಾಗವಟ್ ಗಂಗಾಧರ್ ನಾಯಕ್ ಹಾಗೂ ಮುಖಂಡರು ರೈಲ್ವೆ ಸಿಬ್ಬಂದಿಗಳು ಹಾಗೂ ರೈಲ್ವೆ ಪೊಲೀಸ್ ಉಪಸ್ಥಿತರಿದ್ದರು…
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030