ಅಗ್ನಿಶಾಮಕ ಠಾಣೆಯ ಅಭಿವೃದ್ಧಿಗೆ ಶ್ರಮಿಸಲು ಬದ್ಧ -ಶಾಸಕ ಡಾ. ಶ್ರೀನಿವಾಸ್. ಎನ್.‌ ಟಿ…!!!

Listen to this article

ಅಗ್ನಿಶಾಮಕ ಠಾಣೆಯ ಅಭಿವೃದ್ಧಿಗೆ ಶ್ರಮಿಸಲು ಬದ್ಧ -ಶಾಸಕ ಡಾ. ಶ್ರೀನಿವಾಸ್. ಎನ್.‌ ಟಿ.

ಕೂಡ್ಲಿಗಿ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು 2023- 24 ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಅಗ್ನಿಶಾಮಕ ಠಾಣೆ ಆವರಣದಲ್ಲಿ ನಿರ್ಮಿಸಲಾದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಶುದ್ಧ ಕುಡಿಯುವ ನೀರಿನ ಘಟಕ* ಯೋಜನೆಯನ್ನು ದಿ; 04-09-24 ರಂದು ಉದ್ಘಾಟಿಸಿ ಮಾತನಾಡುತ್ತಾ, ಇದನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸುತ್ತಾ ಸ್ವಚ್ಚತೆಗೆ ಆಧ್ಯತೆ ಕೊಟ್ಟು ಪ್ರತಿಯೊಬ್ಬರೂ ಶುದ್ಧ ನೀರು ಕುಡಿಯುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕಿವಿ ಮಾತು ಹೇಳಿದರು.

ಶಾಸಕರು ಈ ವೇಳೆ ಅಗ್ನಿಶಾಮಕ ಠಾಣೆಯ ಅಧಿಕಾರಿಗಳಿಂದ ಕಛೇರಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮನವಿಯನ್ನು ಸ್ವೀಕರಿಸಿದರು, ಹಾಗೆಯೇ ಈಚಲು ಬೊಮ್ಮನಹಳ್ಳಿ ಗ್ರಾಮದ ಮುಖಂಡರಿಂದ ಸ್ಥಳೀಯ ಕುಂದುಕೊರತೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಕೂಡ್ಲಿಗಿ ಪ. ಪಂ. ಅಧ್ಯಕ್ಷರಾದ ಶ್ರೀ ಕಾವಲ್ಲಿ ಶಿವಪ್ಪ ನಾಯಕ , ಬಡೇಲಡಕು ಗ್ರಾ. ಪಂ. ಅಧ್ಯಕ್ಷರಾದ ಯು. ಮಂಜುಳಾ ಸತೀಶ್, ಅಧಿಕಾರಿಗಳು , ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend