ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು: ಸಂಗಮೇಶ
ಬಾದಾಮಿ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳನ್ನು ಭಾಗವಹಿಸುವ ಮೂಲಕ ಉತ್ತಮ ಆರೋಗ್ಯ ಹಾಗೂ ದೈಹಿಕವಾಗಿ ಸದೃಢಗೊಳ್ಳಬೇಕು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಭಾರಿ ದೈಹಿಕ ಪರಿವೀಕ್ಷಕ ಸಂಗಮೇಶ ಉಳ್ಳೇಗಡ್ಡಿ ಹೇಳಿದರು. .
ಅವರು ಶನಿವಾರ ಸಮೀಪದ ಚಿಕ್ಕಮುಚ್ಚಳಗುಡ್ಡದ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಚದರಂಗ, ಯೋಗಾಸನ ಹಾಗೂ ಬಾಲ್ಬ್ಯಾಡ್ಮಿಂಟನ್ ಸ್ಪರ್ಧೆಗಳ ಉದ್ಘಾಟಿಸಿ ಮಾತನಾಡಿ, ಚದರುಂಗ ಆಟವು ವಿದ್ಯಾರ್ಥಿಗಳ ಬುದ್ದಿಮಟ್ಟ ಹೆಚ್ಚಿಸಲು ಸಹಕಾರಿಯಾಗಿದೆ. ಯೋಗಾಸನದಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕಾಗಿದ್ದು, ವಿದ್ಯಾರ್ಥಿಗಳು ಹೆಚ್ಚು ಹೆಚ್ಚಾಗಿ ಕ್ರೀಡಾಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಪ್ರಭಾರಿ ಮುಖ್ಯೋಪಾಧ್ಯಾಯ ಬಿ.ಆರ್. ಚಿಕ್ಕಣ್ಣವರ ಮಾತನಾಡಿ, ಜಗತ್ತಿನಲ್ಲಿ ಕ್ರೀಡೆಗೆ ಹೆಚ್ಚಿನ ಆಧ್ಯತೆಯಿದ್ದು, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಚದುರಂಗ ಪಟು ಆನಂದ ವಿಶ್ವನಾಥ ಅವರಿಗೆ ಮೊಟ್ಟಮೊದಲು ಕ್ರೀಡಾಕ್ಷೇತ್ರದಲ್ಲಿ ಭಾರತರತ್ನ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಶೋಕ ಪೂಜಾರಿ, ಬಸವರಾಜ ಸಿಂದಗಿಮಠ, ಎಸ್.ಎಸ್. ಉಳ್ಳೇಗಡ್ಡಿ, ಎಸ್.ಬಿ. ಭಜಂತ್ರಿ, ಯಮನಪ್ಪ ಭಜಂತ್ರಿ, ಅನ್ನಪೂರ್ಣ ಕರಿನಾಲಿಗೆ, ದೇವರಾಜ ಅಡ್ಡಿ, ಕೆ.ಬಿ. ಕೋರನ್ನವರ, ರಾಮಾರೂಢ, ಎಲ್.ಪಿ. ಲಮಾಣಿ, ಬಿ.ಜಿ. ನಾಗರಾಳ, ಅನಿತಾ ಸಿಂಗ್, ಬಿ.ಜಿ. ಹಕಾರಿ, ಎಸ್.ಬಿ. ಹೊಸಮನಿ ಮತ್ತಿತರರು ಇದ್ದರು.ಬಾದಾಮಿ ಸಮೀಪದ ಚಿಕ್ಕಮುಚ್ಚಳಗುಡ್ಡದ ಆದರ್ಶ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕ್ರೀಡಾ ಪಂದ್ಯಾವಳಿಯನ್ನು ಉದ್ಘಾಟಿಸಲಾಯಿತು…
ವರದಿ, ಸಚಿನ್ ಬಾಗಲಕೋಟ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030