ದಾಸೋಹಕ್ಕೆ ಭಕ್ತಿ ಸಮರ್ಪಣೆ ಹೊನ್ನಾಳಿ: ತಾಲೂಕಿನ ಎಂ. ಹನುಮನಹಳ್ಳಿ ಗ್ರಾಮದಲ್ಲಿ
ಭಾನುವಾರ ಹೊನ್ನಾಳಿ, ನ್ಯಾಮತಿ ತಾಲೂಕು ಸಾಧು ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಲಿಂ. ಶಿವಕುಮಾರ ಶ್ರೀ 32ನೆಯ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಭಕ್ತಿ ಸಮರ್ಪಣೆ ಕಾರ್ಯಕ್ರಮ ಸಿರಿಗೆರೆ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜರುಗಿತು.
ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಗುರುಗಳು ಸಮಾಜದ ಉದ್ಧಾರಕ್ಕಾಗಿ ದುಡಿಯುತ್ತಿದ್ದಾರೆ. ಇಂಥ ಗುರುಗಳನ್ನು ಟೀಕಿಸಬಾರದು ಎಂದ ಅವರು, ಮುಂದಿನ ವರ್ಷದ ಭಕ್ಕಿ ಸಮರ್ಪಣೆಯನ್ನು ತಾಲೂಕಿನ ಯಕ್ಕನಹಳ್ಳಿಯಲ್ಲಿ ನಡೆಸಲು ಗುರುಗಳ ಅಪ್ಪಣೆ ಪಡೆದು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಾಧುವೀರಶೈವ ಸಮಾಜದ ರಾಜ್ಯಾಧ್ಯಕ್ಷ ಬಸವರಾಜಪ್ಪ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಶಾಸಕ ಬಿ.ಪಿ. ಹರೀಶ್, ಶಿಮುಲ್ ನಿರ್ದೇಶಕ ಬಿ.ಜಿ. ಬಸವರಾಜಪ್ಪ, ಹೊನ್ನಾಳಿ ತಾಲೂಕು ಸಾಧು ವೀರಶೈವ ಸಮಾಜದ ಅಧ್ಯಕ್ಷ ಎಚ್. ಕೆ. ಗದ್ದಿಗೇಶ್ ಮಾತನಾಡಿದರು. ಸುಮತಿ ಜಯಪ್ಪ ಉಪನ್ಯಾಸ ನೀಡಿದರು. ನ್ಯಾಮತಿ ತಾ. ಸಾಧು ವೀರಶೈವ ಸಮಾಜದ ಅಧ್ಯಕ್ಷ ಶಿವಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಜಿ. ವಿಶ್ವನಾಥ್, ಜಿಪಂ ಮಾಜಿ ಸದಸ್ಯ ಕೆ.ಎಚ್. ಗುರುಮೂರ್ತಿ, ಕೆಂಗಲಹಳ್ಳಿ ಷಣ್ಮುಖಪ್ಪ, ಶಿವ ಬ್ಯಾಂಕ್ನ ಅಧ್ಯಕ್ಷ ಶಿವಕುಮಾರ್, ಶಿಮುಲ್ ನಿರ್ದೇಶಕ ಎಚ್. ಕೆ. ಬಸಪ್ಪ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು…
ವರದಿ, ಯುವರಾಜ್, ಹೊನ್ನಾಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030