ಹನುಮನಹಳ್ಳಿಯ ಬಹುದಿನಗಳ ಬೇಡಿಕೆಯನ್ನು ಪೂರೈಸಿದ ಶಾಸಕ – ಡಾ. ಶ್ರೀನಿವಾಸ್. ಎನ್.ಟಿ.
ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ; 19-09-2024 ರಂದು ಹನುಮನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಡಿತರ ವಿತರಣಾ ಉಪಕೇಂದ್ರ ವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ಹನುಮನಹಳ್ಳಿ ಗ್ರಾಮದ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ಜೊತೆಗೆ ಎಲ್ಲಾ ವರ್ಗದ ಜನರು ಮತ್ತು ಹಳ್ಳಿಗಳನ್ನು ಅಭಿವೃದ್ಧಿ ದೃಷ್ಟಿಯಿಂದ ಸಮಾನತೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು. ಮುಂದಿನ ದಿನಗಳಲ್ಲಿ ಹನುಮನಹಳ್ಳಿ ಗ್ರಾಮದ ಸರ್ವ ರೀತಿಯ ಅಭಿವೃದ್ಧಿಗೆ ಒತ್ತು ಕೊಡುವೆ ಎಂದೂ ಹೇಳಿದರು. ಸಭೆ ಮುಗಿದ ಬಳಿಕ ಜನರ ವಸತಿ ಬೇಡಿಕೆ ಮತ್ತು ಬೆಳೆ ವಿಮೆಗೆ ಸಂಬಂಧಿಸಿದಂತೆ ಶಾಸಕರು ಸ್ಪಷ್ಟೀಕರಣ ನೀಡಿದರು. ಕ್ಷೇತ್ರದಲ್ಲಿ ಬಡವರು ಮತ್ತು ಕಡುಬಡವರು ಇರುವುದರಿಂದ ಗಂಭೀರವಾಗಿ ಪರಿಗಣಿಸಿ ಅರ್ಹತೆ ಇರುವವರನ್ನು ಪ್ರಾಮಾಣಿಕವಾಗಿ ಗುರುತಿಸಿ ಸೂರು ಇಲ್ಲದವರಿಗೆ ಸೂರು ಕಲ್ಪಿಸಿಕೊಡುತ್ತೇವೆ ಎಂದೂ ಹೇಳಿದರು. ಈ ಸಂದರ್ಭದಲ್ಲಿ ಮುಖಂಡರಾದ ಅಧಿಕಾರಿಗಳು, ರಾಜಣ್ಣ, ಶಾಂತನಗೌಡ, ಗ್ರಾ. ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030