ಗೊಡಬನಹಾಳ್‌ನಲ್ಲಿ ಪೋಷಣ್ ಮಾಸಾಚರಣೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ…!!!

Listen to this article

ಗೊಡಬನಹಾಳ್‌ನಲ್ಲಿ ಪೋಷಣ್ ಮಾಸಾಚರಣೆ
ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

ಚಿತ್ರದುರ್ಗ:ರಾಷ್ಟಿಯ ಪೋಷಣೆ ಮಾಸಚಾರಣೆ ಅಂಗವಾಗಿ ಚಿತ್ರದುರ್ಗ ತಾಲ್ಲೂಕು ಗೊಡಬೀನಾಹಾಳ್ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಿ, ಗ್ರಾಮದ ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಿಶು ಮೇಲ್ವಿಚಾರಕಿ ಇಂದಿರಾ.ಆರ್, ಬಾಲ್ಯ ವಿವಾಹ ನಿಷೇದ ಕಾನೂನಿನ ಬಗ್ಗೆ ತಿಳಿಸಿ 18 ವರ್ಷ ತುಂಬುವವರೆಗೂ ಯಾರು ಬಾಲ್ಯ ವಿವಾಹ ಮಾಡುವಂತಿಲ್ಲ. ಇದನ್ನು ಮೀರಿ ಯಾರಾದರು ಬಾಲ್ಯ ವಿವಾಹ ಮಾಡಿದಲ್ಲಿ ಪೊಲೀಸರಿಗೆ ದೂರು ನೀಡಿ ಎಫ್.ಐ.ಆರ್ ದಾಖಲಿಸಲಾಗುವುದು. ಬಾಲ್ಯ ವಿವಾಹವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಕಠಿಣ ಶಿಕ್ಷೆ ವಿಧಿಸುವುದು. ಬಾಲ್ಯ ವಿವಾಹ ಕಂಡು ಬಂದಲ್ಲಿ 1098 ಕ್ಕೆ ಕರೆ ಮಾಡಿ ದೂರು ನೀಡಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳು ಮತ್ತು ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಗರ್ಭಿಣಿ ಬಾಣಂತಿಯರಿಗೆ ಅರಿವು ಮೂಡಿಸಿದರು.
ಆರೋಗ್ಯ ಇಲಾಖೆ ವತಿಯಿಂದ ಸ್ವಚ್ಛತೆ, ರಕ್ತ ಹೀನತೆ ಮತ್ತು ಸ್ಥನ್ಯ ಪಾನ ಸಪ್ತಾಹದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಆರೋಗ್ಯ ಇಲಾಖೆಯ ಸುಧಾಕರ್ ಮಾತಾಡಿ ಅಂಗನವಾಡಿ ಕಾರ್ಯಕರ್ತರು ಅಪೌಷ್ಠಿಕ ಮಕ್ಕಳನ್ನು ಸರಿಯಾಗಿ ಗುರುತಿಸಿಬೇಕು. ಅವರು ಸಾಮಾನ್ಯ ಆರೋಗ್ಯ ಹೊಂದುವವರೆಗೂ ಪ್ರತಿ ಅಪೌಷ್ಟಿಕ ಮನೆಗಳಿಗೆ ತೆರಳಿ ಮಕ್ಕಳ ಆರೋಗ್ಯ ಮೇಲ್ವಿಚಾರಣೆ ನಡೆಸಬೇಕು ಎಂದರು. ಕಾರ್ಯಕ್ರಮದಲ್ಲಿ ಹದಿಹರೆಯದ ಹೆಣ್ಣು ಮಕ್ಕಳಿಗೆ ಪೌಷ್ಟಿಕ ಆಹಾರದ ಮಹತ್ವದ ತಿಳಿಸಲಾಯಿತು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend