ಸ್ವಚ್ಛ-ಸುಂದರ ನಗರವನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಿ: ಮೇಯರ್ ಮುಲ್ಲಂಗಿ ನಂದೀಶ್
ಬಳ್ಳಾರಿ,:ಬಳ್ಳಾರಿ ನಗರವನ್ನು ಸ್ವಚ್ಛ-ಸುಂದರ ನಗರವನ್ನಾಗಿಸಲು ಪ್ರತಿಯೊಬ್ಬ ನಾಗರಿಕರು ಸ್ವಚ್ಛತೆಗೆ ಆದ್ಯತೆ ನೀಡಲು ಕೈಜೋಡಿಸಬೇಕು ಎಂದು ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಹೇಳಿದರು.
ನೆಹರು ಯುವ ಕೇಂದ್ರ ಹಾಗೂ ಲಿಯಾ ಯೂತ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಮಹ್ಮಾತ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಳ್ಳಾರಿ ನಗರದಲ್ಲಿ ದಿನನಿತ್ಯ ಕಸ ವಿಲೇವಾರಿ ಮಾಡಲಾಗುತ್ತಿದ್ದು, ವಿವಿಧ ಬಗೆಯ ತಾಜ್ಯಗಳನ್ನು ವಿಂಗಡಿಸಿ ವಿಲೇವಾರಿ ಮಾಡುವ ವಾಹನಗಳಿಗೆ ನೀಡಬೇಕು. ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರಕಾರ್ಮಿಕರಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಅರಣ್ಯ ಇಲಾಖೆಯ ಪಾಯಜ್ ಕ್ವಯಜ್ ಅವರು ಮಾತನಾಡಿ ಪ್ರತಿಯೊಬ್ಬ ನಾಗರಿಕರು ದಿನನಿತ್ಯ ತಮ್ಮ ಸುತ್ತ-ಮುತ್ತಲಿನಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಸ್ವಚ್ಛತೆಯಿಂದ ಇದ್ದರೆ ಯಾವ ರೋಗಗಳು ಸುಳಿಯುವುದಿಲ್ಲ. ಹಾಗೆಯೇ ಪರಿಸರ ಮಾಲಿನ್ಯವಾಗುವುದಿಲ್ಲ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕ್ಯಾಪ್, ಪುಸ್ತಕ-ಪೆನ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಪ್ರಾರ್ಚಾಯರಾದ ಆನಂದ, ಕಾಲೇಜು ಸಿಬ್ಬಂದಿಗಳಾದ ಪೆದ್ದನ್ನ ಮತ್ತು ರಾಮಕೃಷ್ಣ ಹಾಗೂ ಲಿಯಾ ಯೂತ್ ಅಸೋಸಿಯೇಷನ್ ಅಧ್ಯಕ್ಷ ಅಬ್ರಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030