ರೈತರ ಬಹು ನಿರೀಕ್ಷಿತ ಮೆಣಸಿನಕಾಯಿ ಮಾರುಕಟ್ಟೆಗೆ 14 ಎಕರೆ ಸ್ಥಳ ಗುರುತು,..!!!

Listen to this article

ರೈತರ ಬಹು ನಿರೀಕ್ಷಿತ ಮೆಣಸಿನಕಾಯಿ ಮಾರುಕಟ್ಟೆಗೆ 14 ಎಕರೆ ಸ್ಥಳ ಗುರುತು,
ರಾಯಚೂರು,
ರಾಯಚೂರು ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಒಂದಾದ ಮೆಣಸಿನಕಾಯಿ ಮಾರುಕಟ್ಟೆಗೆ ಸರ್ಕಾರವು 14 ಎಕರೆ ಸ್ಥಳ ಗುರುತು ಮಾಡಿದೆ.
ಜಿಲ್ಲೆಯ ದೇವದುರ್ಗ, ರಾಯಚೂರು, ಸಿಂಧನೂರು, ಮಸ್ಕಿ ಹಾಗೂ ಮಾನ್ವಿ ತಾಲೂಕುಗಳಲ್ಲಿ ಮೆಣಸಿನಕಾಯಿ ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ,
ಆದರೆ ರೈತರಿಗೆ ಸ್ಥಳೀಯ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದರಿಂದ ದೂರದ ಬ್ಯಾಡಗಿ ಹಾಗೂ ಗುಂಟೂರ್ ಗೆ ರೈತರು ತಾವು ಬೆಳೆದ ಮೆಣಸಿನಕಾಯಿಯನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ ಹಾಗೂ ಕೆಲವೊಮ್ಮೆ ರೈತರು ಮೆಣಸಿನಕಾಯಿ ತೆಗೆದುಕೊಂಡು ಹೋದಾಗ ಸೂಕ್ತವಾದ ಬೆಲೆ ಸಿಗದೇ ನಷ್ಟವನ್ನು ಅನುಭವಿಸಬೇಕಾದ ಪರಿಸ್ಥಿತಿ ಬಂದಿರುತ್ತದೆ.
ಸದ್ಯ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣ ಕಾರ್ಯಕ್ಕೆ ಡಿಪಿಆರ್ ಸಿದ್ಧಪಡಿಸಿರುವುದರಿಂದ ರೈತರು ಸಂತಸಗೊಂಡಿದ್ದಾರೆ.
ಹದಿನಾಲ್ಕು ಎಕರೆ ಸ್ಥಳ ಗುರುತು,
ರಾಯಚೂರಿನ ಹತ್ತಿ ಮಾರುಕಟ್ಟೆಯ ಹಿಂಬದಿ ಮೆಣಸಿನಕಾಯಿ ಮಾರುಕಟ್ಟೆಗೆ ಹದಿನಾಲ್ಕು ಎಕರೆ ಸ್ಥಳ ನಿಗದಿಪಡಿಸಲಾಗಿದೆ ಈಗಾಗಲೇ ವೀ ಸ್ಸ್ಕೃತ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಒಟ್ಟು 40 ಕೋಟಿ ರೂಪಾಯಿ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಿಸಬೇಕಿದು ಟೆಂಡರ್ ಮಾತ್ರ ಬಾಕಿ ಉಳಿದಿದೆ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಮುಗಿದರೆ ಕಾಮಗಾರಿ ಪ್ರಾರಂಭಗೊಳ್ಳುತ್ತದೆ…

ವರದಿ. ನಾಗರಾಜ್, ವಿ, ರಾಯಚೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend