ಶಾಸಕರ ಸಮ್ಮುಖದಲ್ಲಿ ಈಶಾನ್ಯ ಪದವೀಧರ ಕ್ಷೇತ್ರ ರಾಜ್ಯ ವಿಧಾನಪರಿಷತ್ ಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ…!!!

Listen to this article

ಈ ದಿನ ಕೂಡ್ಲಿಗಿ ಶಾಸಕರಾದ ಡಾಕ್ಟರ್. ಎನ್ . ಟಿ.ಶ್ರೀನಿವಾಸ್ ಇವರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆ ಈಶಾನ್ಯ ಪದವೀಧರ ಕ್ಷೇತ್ರ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಬಿ. ಪಾಟೀಲ್ ಇವರ ಪರವಾಗಿ ಎಲ್ಲಾ ಹೋಬಳಿಗಳಿಂದ ಪ್ರಮುಖ ಕಾರ್ಯಕರ್ತರ ಪೂರ್ವ ಭಾವಿ ಸಭೆಯನ್ನು ಕರೆದು ನಮ್ಮ ಕ್ಷೇತ್ರದಲ್ಲಿ ಈ ಹಿಂದೆ ನನಗೆ ಯಾವರೀತಿ ಅತೀ ಹೆಚ್ಚು ಮತಗಳಿಂದ ಗೆಲ್ಲಿಸಿದ್ದೀರಿ ಅದೇ ತರಹ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಯಾಗಿರುವಂತಹ ಡಾ. ಚಂದ್ರಶೇಖರ ಬಿ. ಪಾಟೀಲ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು.

ನಮ್ಮ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೊಳಿಸಿ ಅದರಂತೆ ನಡೆದುಕೊಂಡಿದ್ದು ಈ ಒಂದು ಯೋಜನೆಗಳು ಜನರ ಮನಸ್ಸನ್ನು ಮುಟ್ಟಿರುವುದರಿಂದ ನಾವು ಪದವೀಧರರನ್ನು ಸಂಪರ್ಕ ಮಾಡಿ ಅವರಿಗೆ ನಮ್ಮ ಪಕ್ಷದ ಸಾಧನೆಗಳನ್ನು ತಿಳಿಸಿ ಬಿ ಪಾಟೀಲ್ ಅವರಿಗೆ ಮತದಾನ ಮಾಡುವಂತೆ ನಾವೆಲ್ಲರೂ ಒಂದು ತಂಡವನ್ನು ರಚನೆ ಮಾಡಿಕೊಂಡು ಎಲ್ಲ ಮತದಾರರನ್ನು ಸಂಪರ್ಕಿಸುವ ಮೂಲಕ ನಮ್ಮ ತಾಲೂಕಿನಲ್ಲಿ ಅತಿ ಹೆಚ್ಚು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ಹಾಕುವಂತೆ ಮನವೊಲಿಸಬೇಕು ಎಂದು ಹೇಳಿದರು ನಾವು ನಮ್ಮದೇ ಸರ್ಕಾರ ಇರೋದ್ರಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೊಳಿಸುವುದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವುದು ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ಪದವೀಧರರ ಸಮಸ್ಯೆಗಳನ್ನು ನಿವಾರಿಸುವುದು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರದ ಅನುದಾನಕ್ಕೆ ಒಳಪಡಿಸುವುದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೋದ್ಯಮ ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹೇರಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಕಲ್ಪಿಸುವುದು ಇನ್ನು ಅನೇಕ ಅಂಶಗಳನ್ನು ಈಡೇರಿಸಲು ಈಶಾನ್ಯ ಪದವೀಧರ ಕ್ಷೇತ್ರ ಮತದಾರರು ಡಾ ಚಂದ್ರಶೇಖರ್ ಬಿ ಪಾಟೀಲ್ ಇವರಿಗೆ ಮತ ನೀಡಲು ಮನವಿ ಮಾಡಲಾಯಿತು.

ನಾವು ಘೋಷಣೆ ಮಾಡಿದ್ದ ಗ್ಯಾರೆಂಟಿ ಯೋಜನೆಗಳನ್ನು ಅಪಹಾಸ್ಯ ಮಾಡುತ್ತಿದ್ದ ಅನ್ಯ ಪಕ್ಷಗಳಿಗೆ ವಾಸ್ತವ ಅರಿವಾಗಿದೆ ಬಡವರ ದುಡ್ಡನ್ನು ಬಡವರಿಗೆ ತಲುಪಿಸಲು ಸಹಕಾರಿಯಾಗಿದೆ ನಮ್ಮ ತಾಲೂಕಿನಲ್ಲಿ ಮುಖಂಡರ ತಂಡಗಳನ್ನು ರಚನೆ ಮಾಡಿಕೊಂಡು ಆಯಾ ಭಾಗದ ಪದವೀಧರರನ್ನು ಖುದ್ದಾಗಿ ಭೇಟಿ ಮಾಡಿ ಅವರಿಗೆ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ಹಾಕುವಂತೆ ಶ್ರಮಿಸಲಾಗುವುದು ಎಂದರು ಈಗ ಇರುವ ಮುರಾರ್ಜಿ ಶಾಲೆಗಳ ಸಂಖ್ಯೆ ಕೂಡ್ಲಿಗಿ ತಾಲೂಕಿನಲ್ಲಿ ಕಡಿಮೆ ಇದ್ದು ಇನ್ನು ಹೆಚ್ಚು ಮುರಾರ್ಜಿ ಶಾಲೆಗಳು ಪ್ರಾರಂಭ ಮಾಡಿ ಎಲ್ಲ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಬೇಕು ಎಂದು ಹೇಳಿದರು ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದರು ಜಯಮ್ಮನವರ ರಾಘಣ್ಣ ಮಾತನಾಡಿ ಕ್ಷೇತ್ರದ ಎಲ್ಲಾ ಮತದಾರರನ್ನು ಸಂಪರ್ಕಿಸಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಯೋಜನೆಗಳನ್ನು ಮನವರಿಕೆ ಮಾಡಿ ನಮ್ಮ ಪಕ್ಷದ ಅಭ್ಯರ್ಥಿಗೆ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುರು ಸಿದ್ದನಗೌಡ ಇವರು ಮಾತನಾಡಿ ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಎಲ್ಲರ ಮನ ಮುಟ್ಟಿದ್ದು ಮತ್ತು ಎಲ್ಲಾ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದ್ದು ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗುತ್ತದೆ ಎಂದರು ಈ ಸಂದರ್ಭದಲ್ಲಿ ಅಶ್ವಮೇಧ ಗ್ರೂಪ್ ಕಂಪನಿಯ ಮಲ್ಲಿಕಾರ್ಜುನ್ ನರಸಿಂಹ ಗಿರಿ ವೆಂಕಟೇಶ್ ಉಮೇಶಣ್ಣ ಕೃಷಿಕ ಸಮಾಜದ ಮಾಜಿ ಅಧ್ಯಕ್ಷರು ಆದ ಯರಿಸ್ವಾಮಿ ಬಣವಿ ಕಲ್ ಹಾರಕಬಾವಿ ಶೇಖರಪ್ಪ ಹಿರಿಯ ಮುಖಂಡರು ನಿವೃತ್ತ ಶಿಕ್ಷಕರಾದ ಬಸವರಾಜಪ್ಪ ಮತ್ತು ಅನೇಕ ಪದವೀದರರು ಸಭೆಗೆ ಬಂದು ಸಲಹೆ ನೀಡಿದರಲ್ಲದೆ ಪಕ್ಷದ ಅಭ್ಯರ್ಥಿ ಗೆಲುವಿಗೆ ರ್ಮಿಸುತ್ತೇವೆ ಎಂದು ಹೇಳಿದರು…

ವರದಿ, ಎಂ, ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend