ಸಚಿವ ಸ್ಥಾನ ಅಕಾoಕ್ಷಿ ನಾನಲ್ಲ ಶಾಸಕ ಡಾ // ಏನ್. ಟಿ. ಶ್ರೀನಿವಾಸ್…!!!

Listen to this article

ಸಚಿವ ಸ್ಥಾನ ಅಕಾoಕ್ಷಿ ನಾನಲ್ಲ ಡಾ // ಏನ್. ಟಿ. ಶ್ರೀನಿವಾಸ್

ಕೂಡ್ಲಿಗಿ ಕ್ಷೇತ್ರದಲ್ಲಿ ಪ್ರತಿಯೊಬ್ಬರ ಪ್ರೀತಿ ವಿಶ್ವಾಸದಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದು, ರಾಜಕೀಯದಲ್ಲಿ ನನಗೆ ಅನುಭವದ ಕೊರತೆ ಇದೆ ಎಂಬುದು ನನ್ನ ಭಾವನೆ. ಕ್ಷೇತ್ರದ ಅಭಿವೃದ್ಧಿಯೊಂದೇ ನನ್ನ ಗುರಿಯಾಗಿದ್ದು, ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ನನ್ನ ಮೇಲಿನ ಪ್ರೀತಿ, ಅಭಿಮಾನದಿಂದ ಛಲವಾದಿ ಮಹಾಸಭಾ ಪದಾಧಿಕಾರಿಗಳು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿರುವುದು ಪತ್ರಿಕೆಗಳಲ್ಲಿ ವರದಿ ಬಂದ ನಂತರವೇ ಗೊತ್ತಾಗಿದೆ. ರಾಜಕೀಯ ಕ್ಷೇತ್ರಕ್ಕೆ ಮೊದಲ ಬಾರಿ ಪಾದರ್ಪಣೆ ಮಾಡಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ನಮ್ಮ ವಾಲ್ಮೀಕಿ ಸಮುದಾಯದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಹಿರಿಯ ಶಾಸಕರಿದ್ದಾರೆ. ಅಂಥದ್ದರಲ್ಲಿ ನನಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಸಿರುವುದು ಸಮಯೋಚಿತವಲ್ಲ ಎಂದೇ ಭಾವಿಸಿದ್ದೇನೆ. ಹಾಗಾಗಿ, ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂಬುದು ತಮ್ಮಗಳ ಗಮನಕ್ಕೆ ತರಬಯಸುತ್ತೇನೆ.ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend