ಬಾಲಕಿಯರ ಮತ್ತು ಬಾಲಕರ ವಸತಿ ನಿಲಯಗಳಿಗೆ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಬೇಟಿ
ದಿ:20.07.2024 ರಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ನಿಲಯಗಳ ಮೂಲ ಸೌಕರ್ಯ, ಕುಂದು ಕೊರತೆಗಳ ಬಗ್ಗೆ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ನಿಲಯಗಳ ಸ್ವಚ್ಛತೆ, ಆಹಾರದ ಗುಣಮಟ್ಟ, ವಿದ್ಯಾರ್ಥಿಗಳ ಕೊಠಡಿ, ಅಡಿಗೆ ಮನೆ, ಆಹಾರ ವಸ್ತುಗಳ ದಾಸ್ತಾನು ಕೇಂದ್ರ, ಸ್ನಾನ ಗೃಹ, ಶೌಚಾಲಯ, ಅಲ್ಲಿನ ಸುತ್ತಮುತ್ತ ಪರಿಸರವನ್ನು ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ವಿದ್ಯಾಭ್ಯಾಸ ಕುರಿತು ಶೈಕ್ಷಣಿಕ ವಿಚಾರವನ್ನು ಚರ್ಚಿಸುತ್ತಾ ಊಟ ಸೇವಿಸಿದರು, ನಂತರ ಪಶು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪ್ರಮುಖ ಮುಖಂಡರುಗಳು ಹಾಗೂ ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030